Advertisement
MIRROR FOCUS

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ | ಉತ್ತರಪ್ರದೇಶದಲ್ಲಿ 21 ಲಕ್ಷ ರೈತರು ಯೋಜನೆಗೆ ಅನರ್ಹರು…! |

Share

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಉತ್ತರ ಪ್ರದೇಶದಲ್ಲಿ ಆಯ್ಕೆಯಾದ 21 ಲಕ್ಷ ರೈತರು ಈ ಯೋಜನೆಗೆ ಅನರ್ಹರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ರಾಜ್ಯ ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ ಹೇಳಿದ್ದಾರೆ.

Advertisement
Advertisement

ಕೇಂದ್ರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಉತ್ತರಪ್ರದೇಶದಲ್ಲಿ  ಒಟ್ಟು 2.85 ಕೋಟಿ ರೈತರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಈ ಪೈಕಿ 21 ಲಕ್ಷ ಫಲಾನುಭವಿಗಳು ಅನರ್ಹರಾಗಿದ್ದಾರೆ. 1.71 ಕೋಟಿ ಫಲಾನುಭವಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಉಳಿದವರ ಪರಿಶೀಲನೆ ನಡೆಯುತ್ತಿದೆ ಎಂದು ಸೂರ್ಯ ಪ್ರತಾಪ್ ಶಾಹಿ  ತಿಳಿಸಿದ್ದಾರೆ. ಯೋಜನೆಯಡಿ ಇದುವರೆಗೆ ಅನರ್ಹ ರೈತರಿಗೆ ನೀಡಿರುವ ಮೊತ್ತವನ್ನು ಅವರಿಂದ ವಸೂಲಿ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಪತಿ ಮತ್ತು ಪತ್ನಿ ಇಬ್ಬರೂ ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿರುವ ಇಂತಹ ಅನೇಕ ಪ್ರಕರಣಗಳಿವೆ. ಯೋಜನೆಗೆ ಅನರ್ಹರೆಂದು ಕಂಡುಬಂದವರಲ್ಲಿ ಆದಾಯ ತೆರಿಗೆ ಸಲ್ಲಿಸುತ್ತಿದ್ದ ಅನೇಕರು ಸೇರಿದ್ದಾರೆ ಎಂದು ಅವರು ವಿವರಿಸಿದರು.

Advertisement

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮೂಲಕ ದೇಶದ ರೈತರಿಗೆ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಮೀನು ಹೊಂದಿರುವ ರೈತರ ಖಾತೆಗೆ ವರ್ಷಕ್ಕೆ 6000 ರೂಪಾಯಿಯನ್ನು ಮೂರು ಕಂತುಗಳ ಮೂಲಕ ಜಮೆ ಮಾಡುತ್ತದೆ. ಈಚೆಗೆ ಈ ಯೋಜನೆಯ ಮೂಲಕ ಅನೇಕ ಅನರ್ಹರೂ ಫಲಾನುಭವಿಗಳು ಇರುವುದರ ಬಗ್ಗೆ ದೂರುಗಳು ಬಂದಿತ್ತು. ಹೀಗಾಗಿ ದೇಶದಾದ್ಯಂತ ಪತ್ತೆ ಕಾರ್ಯ ಆರಂಭವಾಗಿತ್ತು. ಇದಕ್ಕಾಗಿ ಆಧಾರ್‌ ಲಿಂಕ್‌ ಸಹಿತ ವಿವಿಧ ಮಾರ್ಗಗಳನ್ನು ಸರ್ಕಾರ ಅನುಸರಿಸಿತ್ತು. ರಾಜ್ಯದಲ್ಲೂ ಈ ಪ್ರಕ್ರಿಯೆ ನಡೆಯುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

7 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

2 days ago