Advertisement
MIRROR FOCUS

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ | ಉತ್ತರಪ್ರದೇಶದಲ್ಲಿ 21 ಲಕ್ಷ ರೈತರು ಯೋಜನೆಗೆ ಅನರ್ಹರು…! |

Share

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಉತ್ತರ ಪ್ರದೇಶದಲ್ಲಿ ಆಯ್ಕೆಯಾದ 21 ಲಕ್ಷ ರೈತರು ಈ ಯೋಜನೆಗೆ ಅನರ್ಹರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ರಾಜ್ಯ ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ ಹೇಳಿದ್ದಾರೆ.

ಕೇಂದ್ರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಉತ್ತರಪ್ರದೇಶದಲ್ಲಿ  ಒಟ್ಟು 2.85 ಕೋಟಿ ರೈತರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಈ ಪೈಕಿ 21 ಲಕ್ಷ ಫಲಾನುಭವಿಗಳು ಅನರ್ಹರಾಗಿದ್ದಾರೆ. 1.71 ಕೋಟಿ ಫಲಾನುಭವಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಉಳಿದವರ ಪರಿಶೀಲನೆ ನಡೆಯುತ್ತಿದೆ ಎಂದು ಸೂರ್ಯ ಪ್ರತಾಪ್ ಶಾಹಿ  ತಿಳಿಸಿದ್ದಾರೆ. ಯೋಜನೆಯಡಿ ಇದುವರೆಗೆ ಅನರ್ಹ ರೈತರಿಗೆ ನೀಡಿರುವ ಮೊತ್ತವನ್ನು ಅವರಿಂದ ವಸೂಲಿ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಪತಿ ಮತ್ತು ಪತ್ನಿ ಇಬ್ಬರೂ ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿರುವ ಇಂತಹ ಅನೇಕ ಪ್ರಕರಣಗಳಿವೆ. ಯೋಜನೆಗೆ ಅನರ್ಹರೆಂದು ಕಂಡುಬಂದವರಲ್ಲಿ ಆದಾಯ ತೆರಿಗೆ ಸಲ್ಲಿಸುತ್ತಿದ್ದ ಅನೇಕರು ಸೇರಿದ್ದಾರೆ ಎಂದು ಅವರು ವಿವರಿಸಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮೂಲಕ ದೇಶದ ರೈತರಿಗೆ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಮೀನು ಹೊಂದಿರುವ ರೈತರ ಖಾತೆಗೆ ವರ್ಷಕ್ಕೆ 6000 ರೂಪಾಯಿಯನ್ನು ಮೂರು ಕಂತುಗಳ ಮೂಲಕ ಜಮೆ ಮಾಡುತ್ತದೆ. ಈಚೆಗೆ ಈ ಯೋಜನೆಯ ಮೂಲಕ ಅನೇಕ ಅನರ್ಹರೂ ಫಲಾನುಭವಿಗಳು ಇರುವುದರ ಬಗ್ಗೆ ದೂರುಗಳು ಬಂದಿತ್ತು. ಹೀಗಾಗಿ ದೇಶದಾದ್ಯಂತ ಪತ್ತೆ ಕಾರ್ಯ ಆರಂಭವಾಗಿತ್ತು. ಇದಕ್ಕಾಗಿ ಆಧಾರ್‌ ಲಿಂಕ್‌ ಸಹಿತ ವಿವಿಧ ಮಾರ್ಗಗಳನ್ನು ಸರ್ಕಾರ ಅನುಸರಿಸಿತ್ತು. ರಾಜ್ಯದಲ್ಲೂ ಈ ಪ್ರಕ್ರಿಯೆ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

12 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

13 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago