ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಹವಾಮಾನ ಬದಲಾವಣೆಯೂ ಬೆಳೆಗಳ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಕಡಿಮೆ ಮಾಡಲು ರೈತರಿಗೆ ನಿಖರ ಹವಾಮಾನ ಮುನ್ಸೂಚನೆ ಮಾಹಿತಿ ನೀಡುವುದು, ಹೆಚ್ಚುವರಿ ಇಳುವರಿ ನೀಡುವ ವಿವಿಧ ಬಿತ್ತನೆ ಬೀಜಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರಗಳ ಬೆಲೆ ಏರಿಕೆ ಹೊರತಾಗಿಯೂ ಕೇಂದ್ರ ಸರ್ಕಾರ ರೈತರಿಗೆ ಕೈಗೆಟಕುವ ಬೆಲೆಯಲ್ಲಿ ಸಬ್ಸಿಡಿ ರಸಗೊಬ್ಬರಗಳನ್ನು ಒದಗಿಸುತ್ತಿದೆ . ಕೃಷಿ ಉತ್ಪಾದನೆಗೆ ರಸಗೊಬ್ಬರ ಅತ್ಯಗತ್ಯ ಅಂಶವಾಗಿದೆ. ರಸಗೊಬ್ಬರದ ಬೆಲೆ ಪರಿಶೀಲಿಸಲು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರತಿ ಚೀಲ ಯೂರಿಯಾಗೆ 266 ರೂಪಾಯಿಗಳಿಗೆ ರೈತರಿಗೆ ಒದಗಿಸಲಾಗುತ್ತಿದೆ ಎಂದು ಹೇಳಿದರು. ರೈತರ ಕಲ್ಯಾಣವು ಕೇಂದ್ರ ಸರ್ಕಾರದ ಪರಮ ಆದ್ಯತೆಯಾಗಿದ್ದು, ಈ ವರ್ಷದ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ದಾಖಲೆಯ ಅನುದಾನ ಹಂಚಿಕೆ ಮಾಡಲಾಗಿದೆ ಎಂದರು.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…