Advertisement
MIRROR FOCUS

2032 ರ ವೇಳೆಗೆ ದೇಶದ ಇಂಧನ ಬೇಡಿಕೆ ದ್ವಿಗುಣ | ಪಿಎಂ ಸೂರ್ಯಘರ್ ಯೋಜನೆಗೆ ಆದ್ಯತೆ ಅಗತ್ಯ |

Share

2014ರ ತನಕ ದೇಶದಲ್ಲಿ 75 ಗಿಗಾ ವ್ಯಾಟ್ ಮಾತ್ರ ನವೀಕರಿಸಬಹುದಾದ ಇಂಧನ ಉತ್ಪಾದನೆ ಆಗುತ್ತಿತ್ತು. ಇದೀಗ ಈ ಪ್ರಮಾಣ 208 ಗಿಗಾ ವ್ಯಾಟ್ ಗೆ ಏರಿಕೆಯಾಗಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ದೇಶೀಯ ಉತ್ಪಾದಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. 2032ರ ವೇಳೆಗೆ ಭಾರತದ ಇಂಧನ ಬೇಡಿಕೆ ದ್ವಿಗುಣವಾಗಲಿದ್ದು, ಅದಕ್ಕೆ ಪೂರಕವಾಗಿ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ದಾದ್ ಜೋಶಿ  ಹೇಳಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ವ್ಯವಸ್ಥೆ ಉತ್ಪಾದಕರ ಸಂಘ-KRESMA ಹಾಗೂ ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಘಟಕ ವತಿಯಿಂದ ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಕುರಿತ ಸಂವಾದ ಮತ್ತು ಜಾಗೃತಿ ಕಾರ್ಯಕ್ರಮವನ್ನು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ದಾದ್ ಜೋಶಿ ಉದ್ಘಾಟಿಸಿದರು. ಈ ವೇಳೆ ಕೈಪಿಡಿ, ಭಿತ್ತಿಪತ್ರ ಹಾಗೂ ಪುಸ್ತಕ ಬಿಡುಗಡೆ ಮಾಡಿದರು.

ದೇಶದಲ್ಲಿ ಪಿಎಂ ಸೂರ್ಯಘರ್ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಛಾವಣಿ ಮೇಲೆ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದ್ದು, ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು ನೀಡಿದೆ. ದೇಶದ ಒಟ್ಟಾರೆ ವಿದ್ಯುತ್ ನಲ್ಲಿ ಶೇಕಡ 44ರಷ್ಟು ನವೀಕರಿಸಬಹುದಾದ ಇಂಧನ ಮೂಲವಿದ್ದು, ಕೆಲವೇ ವರ್ಷದಲ್ಲಿ ಈ ಪ್ರಮಾಣ ಶೇಕಡ 50 ದಾಟಲಿದೆ ಎಂದು ಪ್ರಹ್ಲಾದ್‌ ಜೋಶಿ ಹೇಳಿದರು.

ಈ ಸಂದರ್ಭದಲ್ಲಿ KRESMA ಸಂಸ್ಥಾಪಕ ಅಧ್ಯಕ್ಷ ರಮೇಶ್ ಶಿವಣ್ಣ, ಅಧ್ಯಕ್ಷ ಸುರೇಂದ್ರ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

4 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

6 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

11 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago