Advertisement
MIRROR FOCUS

2032 ರ ವೇಳೆಗೆ ದೇಶದ ಇಂಧನ ಬೇಡಿಕೆ ದ್ವಿಗುಣ | ಪಿಎಂ ಸೂರ್ಯಘರ್ ಯೋಜನೆಗೆ ಆದ್ಯತೆ ಅಗತ್ಯ |

Share

2014ರ ತನಕ ದೇಶದಲ್ಲಿ 75 ಗಿಗಾ ವ್ಯಾಟ್ ಮಾತ್ರ ನವೀಕರಿಸಬಹುದಾದ ಇಂಧನ ಉತ್ಪಾದನೆ ಆಗುತ್ತಿತ್ತು. ಇದೀಗ ಈ ಪ್ರಮಾಣ 208 ಗಿಗಾ ವ್ಯಾಟ್ ಗೆ ಏರಿಕೆಯಾಗಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ದೇಶೀಯ ಉತ್ಪಾದಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. 2032ರ ವೇಳೆಗೆ ಭಾರತದ ಇಂಧನ ಬೇಡಿಕೆ ದ್ವಿಗುಣವಾಗಲಿದ್ದು, ಅದಕ್ಕೆ ಪೂರಕವಾಗಿ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ದಾದ್ ಜೋಶಿ  ಹೇಳಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ವ್ಯವಸ್ಥೆ ಉತ್ಪಾದಕರ ಸಂಘ-KRESMA ಹಾಗೂ ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಘಟಕ ವತಿಯಿಂದ ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಕುರಿತ ಸಂವಾದ ಮತ್ತು ಜಾಗೃತಿ ಕಾರ್ಯಕ್ರಮವನ್ನು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ದಾದ್ ಜೋಶಿ ಉದ್ಘಾಟಿಸಿದರು. ಈ ವೇಳೆ ಕೈಪಿಡಿ, ಭಿತ್ತಿಪತ್ರ ಹಾಗೂ ಪುಸ್ತಕ ಬಿಡುಗಡೆ ಮಾಡಿದರು.

ದೇಶದಲ್ಲಿ ಪಿಎಂ ಸೂರ್ಯಘರ್ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಛಾವಣಿ ಮೇಲೆ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದ್ದು, ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು ನೀಡಿದೆ. ದೇಶದ ಒಟ್ಟಾರೆ ವಿದ್ಯುತ್ ನಲ್ಲಿ ಶೇಕಡ 44ರಷ್ಟು ನವೀಕರಿಸಬಹುದಾದ ಇಂಧನ ಮೂಲವಿದ್ದು, ಕೆಲವೇ ವರ್ಷದಲ್ಲಿ ಈ ಪ್ರಮಾಣ ಶೇಕಡ 50 ದಾಟಲಿದೆ ಎಂದು ಪ್ರಹ್ಲಾದ್‌ ಜೋಶಿ ಹೇಳಿದರು.

ಈ ಸಂದರ್ಭದಲ್ಲಿ KRESMA ಸಂಸ್ಥಾಪಕ ಅಧ್ಯಕ್ಷ ರಮೇಶ್ ಶಿವಣ್ಣ, ಅಧ್ಯಕ್ಷ ಸುರೇಂದ್ರ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

7 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

11 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

19 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

21 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

22 hours ago