Advertisement
MIRROR FOCUS

2032 ರ ವೇಳೆಗೆ ದೇಶದ ಇಂಧನ ಬೇಡಿಕೆ ದ್ವಿಗುಣ | ಪಿಎಂ ಸೂರ್ಯಘರ್ ಯೋಜನೆಗೆ ಆದ್ಯತೆ ಅಗತ್ಯ |

Share

2014ರ ತನಕ ದೇಶದಲ್ಲಿ 75 ಗಿಗಾ ವ್ಯಾಟ್ ಮಾತ್ರ ನವೀಕರಿಸಬಹುದಾದ ಇಂಧನ ಉತ್ಪಾದನೆ ಆಗುತ್ತಿತ್ತು. ಇದೀಗ ಈ ಪ್ರಮಾಣ 208 ಗಿಗಾ ವ್ಯಾಟ್ ಗೆ ಏರಿಕೆಯಾಗಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ದೇಶೀಯ ಉತ್ಪಾದಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. 2032ರ ವೇಳೆಗೆ ಭಾರತದ ಇಂಧನ ಬೇಡಿಕೆ ದ್ವಿಗುಣವಾಗಲಿದ್ದು, ಅದಕ್ಕೆ ಪೂರಕವಾಗಿ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ದಾದ್ ಜೋಶಿ  ಹೇಳಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ವ್ಯವಸ್ಥೆ ಉತ್ಪಾದಕರ ಸಂಘ-KRESMA ಹಾಗೂ ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಘಟಕ ವತಿಯಿಂದ ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಕುರಿತ ಸಂವಾದ ಮತ್ತು ಜಾಗೃತಿ ಕಾರ್ಯಕ್ರಮವನ್ನು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ದಾದ್ ಜೋಶಿ ಉದ್ಘಾಟಿಸಿದರು. ಈ ವೇಳೆ ಕೈಪಿಡಿ, ಭಿತ್ತಿಪತ್ರ ಹಾಗೂ ಪುಸ್ತಕ ಬಿಡುಗಡೆ ಮಾಡಿದರು.

ದೇಶದಲ್ಲಿ ಪಿಎಂ ಸೂರ್ಯಘರ್ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಛಾವಣಿ ಮೇಲೆ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದ್ದು, ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು ನೀಡಿದೆ. ದೇಶದ ಒಟ್ಟಾರೆ ವಿದ್ಯುತ್ ನಲ್ಲಿ ಶೇಕಡ 44ರಷ್ಟು ನವೀಕರಿಸಬಹುದಾದ ಇಂಧನ ಮೂಲವಿದ್ದು, ಕೆಲವೇ ವರ್ಷದಲ್ಲಿ ಈ ಪ್ರಮಾಣ ಶೇಕಡ 50 ದಾಟಲಿದೆ ಎಂದು ಪ್ರಹ್ಲಾದ್‌ ಜೋಶಿ ಹೇಳಿದರು.

ಈ ಸಂದರ್ಭದಲ್ಲಿ KRESMA ಸಂಸ್ಥಾಪಕ ಅಧ್ಯಕ್ಷ ರಮೇಶ್ ಶಿವಣ್ಣ, ಅಧ್ಯಕ್ಷ ಸುರೇಂದ್ರ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

6 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

14 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

16 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

22 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

23 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago