ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯ

September 10, 2024
8:04 AM

ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933 ರೈತರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಉಳಿದ 19761 ರೈತರು ಕೂಡಲೇ ಇ-ಕೆವೈಸಿ ಮಾಡಿಕೊಳ್ಳುವಂತೆ ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.

Advertisement

ಇ-ಕೆವೈಸಿ ಮಾಡಿಕೊಳ್ಳದ ನೋಂದಾಯಿತ ರೈತರಿಗೆ ಮುಂದಿನ ಕಂತಿನ ಹಣ ಬಿಡುಗಡೆಯಾಗುವುದಿಲ್ಲ. ಇಕೆವೈಸಿ ಬಾಕಿ ಇರುವ ನೋಂದಾಯಿತ ರೈತರು ತಮ್ಮ ಗ್ರಾಮಕ್ಕೆ ಈಗಾಗಲೇ ನೇಮಿಸಲಾದ ಗ್ರಾಮ ಮಟ್ಟದ ನೋಡಲ್ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಇ-ಕೆವೈಸಿ ಮಾಡಿಕೊಳ್ಳಬೇಕು. ಒಂದೇ ಕುಟುಂಬ ಸದಸ್ಯರೇ ಎಂಬುವುದನ್ನು ಪರಿಶೀಲಿಸಿ ಅರ್ಹ – ಅನರ್ಹರೆಂದು ಘೋಷಿಸಬೇಕಾಗಿರುವ 31148 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಸದಸ್ಯರು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಘೋಷಣೆಯನ್ನು ಸಲ್ಲಿಸಬೇಕು. ಘೋಷಣೆ ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ
ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್
July 7, 2025
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group