ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933 ರೈತರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಉಳಿದ 19761 ರೈತರು ಕೂಡಲೇ ಇ-ಕೆವೈಸಿ ಮಾಡಿಕೊಳ್ಳುವಂತೆ ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ಇ-ಕೆವೈಸಿ ಮಾಡಿಕೊಳ್ಳದ ನೋಂದಾಯಿತ ರೈತರಿಗೆ ಮುಂದಿನ ಕಂತಿನ ಹಣ ಬಿಡುಗಡೆಯಾಗುವುದಿಲ್ಲ. ಇಕೆವೈಸಿ ಬಾಕಿ ಇರುವ ನೋಂದಾಯಿತ ರೈತರು ತಮ್ಮ ಗ್ರಾಮಕ್ಕೆ ಈಗಾಗಲೇ ನೇಮಿಸಲಾದ ಗ್ರಾಮ ಮಟ್ಟದ ನೋಡಲ್ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಇ-ಕೆವೈಸಿ ಮಾಡಿಕೊಳ್ಳಬೇಕು. ಒಂದೇ ಕುಟುಂಬ ಸದಸ್ಯರೇ ಎಂಬುವುದನ್ನು ಪರಿಶೀಲಿಸಿ ಅರ್ಹ – ಅನರ್ಹರೆಂದು ಘೋಷಿಸಬೇಕಾಗಿರುವ 31148 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಸದಸ್ಯರು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಘೋಷಣೆಯನ್ನು ಸಲ್ಲಿಸಬೇಕು. ಘೋಷಣೆ ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…
ಬಾಟಲ್ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…
ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…
ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…