ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933 ರೈತರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಉಳಿದ 19761 ರೈತರು ಕೂಡಲೇ ಇ-ಕೆವೈಸಿ ಮಾಡಿಕೊಳ್ಳುವಂತೆ ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ಇ-ಕೆವೈಸಿ ಮಾಡಿಕೊಳ್ಳದ ನೋಂದಾಯಿತ ರೈತರಿಗೆ ಮುಂದಿನ ಕಂತಿನ ಹಣ ಬಿಡುಗಡೆಯಾಗುವುದಿಲ್ಲ. ಇಕೆವೈಸಿ ಬಾಕಿ ಇರುವ ನೋಂದಾಯಿತ ರೈತರು ತಮ್ಮ ಗ್ರಾಮಕ್ಕೆ ಈಗಾಗಲೇ ನೇಮಿಸಲಾದ ಗ್ರಾಮ ಮಟ್ಟದ ನೋಡಲ್ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಇ-ಕೆವೈಸಿ ಮಾಡಿಕೊಳ್ಳಬೇಕು. ಒಂದೇ ಕುಟುಂಬ ಸದಸ್ಯರೇ ಎಂಬುವುದನ್ನು ಪರಿಶೀಲಿಸಿ ಅರ್ಹ – ಅನರ್ಹರೆಂದು ಘೋಷಿಸಬೇಕಾಗಿರುವ 31148 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಸದಸ್ಯರು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಘೋಷಣೆಯನ್ನು ಸಲ್ಲಿಸಬೇಕು. ಘೋಷಣೆ ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…