ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933 ರೈತರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಉಳಿದ 19761 ರೈತರು ಕೂಡಲೇ ಇ-ಕೆವೈಸಿ ಮಾಡಿಕೊಳ್ಳುವಂತೆ ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ಇ-ಕೆವೈಸಿ ಮಾಡಿಕೊಳ್ಳದ ನೋಂದಾಯಿತ ರೈತರಿಗೆ ಮುಂದಿನ ಕಂತಿನ ಹಣ ಬಿಡುಗಡೆಯಾಗುವುದಿಲ್ಲ. ಇಕೆವೈಸಿ ಬಾಕಿ ಇರುವ ನೋಂದಾಯಿತ ರೈತರು ತಮ್ಮ ಗ್ರಾಮಕ್ಕೆ ಈಗಾಗಲೇ ನೇಮಿಸಲಾದ ಗ್ರಾಮ ಮಟ್ಟದ ನೋಡಲ್ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಇ-ಕೆವೈಸಿ ಮಾಡಿಕೊಳ್ಳಬೇಕು. ಒಂದೇ ಕುಟುಂಬ ಸದಸ್ಯರೇ ಎಂಬುವುದನ್ನು ಪರಿಶೀಲಿಸಿ ಅರ್ಹ – ಅನರ್ಹರೆಂದು ಘೋಷಿಸಬೇಕಾಗಿರುವ 31148 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಸದಸ್ಯರು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಘೋಷಣೆಯನ್ನು ಸಲ್ಲಿಸಬೇಕು. ಘೋಷಣೆ ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…