ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933 ರೈತರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಉಳಿದ 19761 ರೈತರು ಕೂಡಲೇ ಇ-ಕೆವೈಸಿ ಮಾಡಿಕೊಳ್ಳುವಂತೆ ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ಇ-ಕೆವೈಸಿ ಮಾಡಿಕೊಳ್ಳದ ನೋಂದಾಯಿತ ರೈತರಿಗೆ ಮುಂದಿನ ಕಂತಿನ ಹಣ ಬಿಡುಗಡೆಯಾಗುವುದಿಲ್ಲ. ಇಕೆವೈಸಿ ಬಾಕಿ ಇರುವ ನೋಂದಾಯಿತ ರೈತರು ತಮ್ಮ ಗ್ರಾಮಕ್ಕೆ ಈಗಾಗಲೇ ನೇಮಿಸಲಾದ ಗ್ರಾಮ ಮಟ್ಟದ ನೋಡಲ್ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಇ-ಕೆವೈಸಿ ಮಾಡಿಕೊಳ್ಳಬೇಕು. ಒಂದೇ ಕುಟುಂಬ ಸದಸ್ಯರೇ ಎಂಬುವುದನ್ನು ಪರಿಶೀಲಿಸಿ ಅರ್ಹ – ಅನರ್ಹರೆಂದು ಘೋಷಿಸಬೇಕಾಗಿರುವ 31148 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಸದಸ್ಯರು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಘೋಷಣೆಯನ್ನು ಸಲ್ಲಿಸಬೇಕು. ಘೋಷಣೆ ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…