ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933 ರೈತರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಉಳಿದ 19761 ರೈತರು ಕೂಡಲೇ ಇ-ಕೆವೈಸಿ ಮಾಡಿಕೊಳ್ಳುವಂತೆ ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ಇ-ಕೆವೈಸಿ ಮಾಡಿಕೊಳ್ಳದ ನೋಂದಾಯಿತ ರೈತರಿಗೆ ಮುಂದಿನ ಕಂತಿನ ಹಣ ಬಿಡುಗಡೆಯಾಗುವುದಿಲ್ಲ. ಇಕೆವೈಸಿ ಬಾಕಿ ಇರುವ ನೋಂದಾಯಿತ ರೈತರು ತಮ್ಮ ಗ್ರಾಮಕ್ಕೆ ಈಗಾಗಲೇ ನೇಮಿಸಲಾದ ಗ್ರಾಮ ಮಟ್ಟದ ನೋಡಲ್ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಇ-ಕೆವೈಸಿ ಮಾಡಿಕೊಳ್ಳಬೇಕು. ಒಂದೇ ಕುಟುಂಬ ಸದಸ್ಯರೇ ಎಂಬುವುದನ್ನು ಪರಿಶೀಲಿಸಿ ಅರ್ಹ – ಅನರ್ಹರೆಂದು ಘೋಷಿಸಬೇಕಾಗಿರುವ 31148 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಸದಸ್ಯರು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಘೋಷಣೆಯನ್ನು ಸಲ್ಲಿಸಬೇಕು. ಘೋಷಣೆ ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…