ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933 ರೈತರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಉಳಿದ 19761 ರೈತರು ಕೂಡಲೇ ಇ-ಕೆವೈಸಿ ಮಾಡಿಕೊಳ್ಳುವಂತೆ ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ಇ-ಕೆವೈಸಿ ಮಾಡಿಕೊಳ್ಳದ ನೋಂದಾಯಿತ ರೈತರಿಗೆ ಮುಂದಿನ ಕಂತಿನ ಹಣ ಬಿಡುಗಡೆಯಾಗುವುದಿಲ್ಲ. ಇಕೆವೈಸಿ ಬಾಕಿ ಇರುವ ನೋಂದಾಯಿತ ರೈತರು ತಮ್ಮ ಗ್ರಾಮಕ್ಕೆ ಈಗಾಗಲೇ ನೇಮಿಸಲಾದ ಗ್ರಾಮ ಮಟ್ಟದ ನೋಡಲ್ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಇ-ಕೆವೈಸಿ ಮಾಡಿಕೊಳ್ಳಬೇಕು. ಒಂದೇ ಕುಟುಂಬ ಸದಸ್ಯರೇ ಎಂಬುವುದನ್ನು ಪರಿಶೀಲಿಸಿ ಅರ್ಹ – ಅನರ್ಹರೆಂದು ಘೋಷಿಸಬೇಕಾಗಿರುವ 31148 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಸದಸ್ಯರು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಘೋಷಣೆಯನ್ನು ಸಲ್ಲಿಸಬೇಕು. ಘೋಷಣೆ ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…