ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933 ರೈತರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಉಳಿದ 19761 ರೈತರು ಕೂಡಲೇ ಇ-ಕೆವೈಸಿ ಮಾಡಿಕೊಳ್ಳುವಂತೆ ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ಇ-ಕೆವೈಸಿ ಮಾಡಿಕೊಳ್ಳದ ನೋಂದಾಯಿತ ರೈತರಿಗೆ ಮುಂದಿನ ಕಂತಿನ ಹಣ ಬಿಡುಗಡೆಯಾಗುವುದಿಲ್ಲ. ಇಕೆವೈಸಿ ಬಾಕಿ ಇರುವ ನೋಂದಾಯಿತ ರೈತರು ತಮ್ಮ ಗ್ರಾಮಕ್ಕೆ ಈಗಾಗಲೇ ನೇಮಿಸಲಾದ ಗ್ರಾಮ ಮಟ್ಟದ ನೋಡಲ್ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಇ-ಕೆವೈಸಿ ಮಾಡಿಕೊಳ್ಳಬೇಕು. ಒಂದೇ ಕುಟುಂಬ ಸದಸ್ಯರೇ ಎಂಬುವುದನ್ನು ಪರಿಶೀಲಿಸಿ ಅರ್ಹ – ಅನರ್ಹರೆಂದು ಘೋಷಿಸಬೇಕಾಗಿರುವ 31148 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇಬ್ಬರು ಸದಸ್ಯರು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಘೋಷಣೆಯನ್ನು ಸಲ್ಲಿಸಬೇಕು. ಘೋಷಣೆ ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…