ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರ್ಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್ ಸೈಟ್ಗೆ ಭೇಟಿ ನೀಡಿ ಆಧಾರ್ ನಂಬರ್, ಮೊಬೈಲ್ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…