ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರ್ಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್ ಸೈಟ್ಗೆ ಭೇಟಿ ನೀಡಿ ಆಧಾರ್ ನಂಬರ್, ಮೊಬೈಲ್ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…