ಸುದ್ದಿಗಳು

ಇಂದು ಮಧ್ಯಾಹ್ನ ಬೆಳಗಾವಿಯಿಂದ ಪಿ.ಎಂ ಕಿಸಾನ್ ಬಿಡುಗಡೆ | ಕೆಲವೇ ಗಂಟೆಗಳಲ್ಲಿ ರೈತರ ಹಣ ಖಾತೆಗೆ ಜಮಾ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

13 ನೇ ಕಂತಿನ ಪಿ.ಎಂ ಕಿಸಾನ್‌ ಹಣ ರೈತರ ಖಾತೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಖಾತೆಗೆ ಜಮಾ ಆಗಲಿದೆ.  ಈ ಬಾರಿ ಕರ್ನಾಟಕದ ಬೆಳಗಾವಿಯಿಂದಲೇ ರಾಷ್ಟ್ರದ ಜನರ ಖಾತೆಗೆ  ಬಿಡುಗಡೆ ಆಗಲಿದೆ.

Advertisement
Advertisement

ಕೇಂದ್ರ ಸರ್ಕಾರವು ರೈತರ ಕಲ್ಯಾಣ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ಪ್ರದರ್ಶಿಸುವ ಮತ್ತೊಂದು ಕ್ರಮವಾಗಿ ಪ್ರಧಾನಮಂತ್ರಿ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅನ್ನು ಪರಿಚಯಿಸಿದ್ದಾರೆ. ಇನ್ನು ಪಿ.ಎಂ ಕಿಸಾನ್‌ನ 13ನೇ ಕಂತಿನ 16,000 ಕೋಟಿ ರೂ.ಗಳನ್ನು 8 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡಲಿದ್ದಾರೆ.

ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ ತಲಾ 2000 ರೂ.ನಂತೆ ಮೂರು ಸಮಾನ ಕಂತುಗಳಲ್ಲಿ 6000 ರೂ. ಧನ ಸಹಾಯ ಮಾಡಲಾಗುವುದು. ಫೆಬ್ರವರಿ 27 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ 13ನೇ ಕಂತಿನ ಹಣವನ್ನು ವರ್ಗಾಯಿಸಲಿದ್ದಾರೆ.

ಅದರ ನಂತರ, ಮಧ್ಯಾಹ್ನ 3:15 ರ ಸುಮಾರಿಗೆ, ಬೆಳಗಾವಿಯಲ್ಲಿ ಶಂಕುಸ್ಥಾಪನೆ ಮತ್ತು ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಸಮರ್ಪಿಸಲಿದ್ದಾರೆ. ಹಾಗೆ ಪಿಎಂ-ಕಿಸಾನ್‌ನ 13 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ರೈತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಪ್ರಧಾನಿಯವರು, 16,000 ಕೋಟಿಗಳನ್ನು 8 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡಲಿದ್ದಾರೆ.

ಯೋಜನೆಯಡಿ, ಅರ್ಹ ರೈತ ಕುಟುಂಬಗಳಿಗೆ ರೂ. 6000 ವರ್ಷಕ್ಕೆ ಮೂರು ಸಮಾನ ಕಂತುಗಳಲ್ಲಿ ತಲಾ ರೂ. 2000. ನೀಡಲಾಗುತ್ತದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

5 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

5 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

5 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

5 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

15 hours ago