13 ನೇ ಕಂತಿನ ಪಿ.ಎಂ ಕಿಸಾನ್ ಹಣ ರೈತರ ಖಾತೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಖಾತೆಗೆ ಜಮಾ ಆಗಲಿದೆ. ಈ ಬಾರಿ ಕರ್ನಾಟಕದ ಬೆಳಗಾವಿಯಿಂದಲೇ ರಾಷ್ಟ್ರದ ಜನರ ಖಾತೆಗೆ ಬಿಡುಗಡೆ ಆಗಲಿದೆ.
ಕೇಂದ್ರ ಸರ್ಕಾರವು ರೈತರ ಕಲ್ಯಾಣ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ಪ್ರದರ್ಶಿಸುವ ಮತ್ತೊಂದು ಕ್ರಮವಾಗಿ ಪ್ರಧಾನಮಂತ್ರಿ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅನ್ನು ಪರಿಚಯಿಸಿದ್ದಾರೆ. ಇನ್ನು ಪಿ.ಎಂ ಕಿಸಾನ್ನ 13ನೇ ಕಂತಿನ 16,000 ಕೋಟಿ ರೂ.ಗಳನ್ನು 8 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡಲಿದ್ದಾರೆ.
ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ ತಲಾ 2000 ರೂ.ನಂತೆ ಮೂರು ಸಮಾನ ಕಂತುಗಳಲ್ಲಿ 6000 ರೂ. ಧನ ಸಹಾಯ ಮಾಡಲಾಗುವುದು. ಫೆಬ್ರವರಿ 27 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ 13ನೇ ಕಂತಿನ ಹಣವನ್ನು ವರ್ಗಾಯಿಸಲಿದ್ದಾರೆ.
ಅದರ ನಂತರ, ಮಧ್ಯಾಹ್ನ 3:15 ರ ಸುಮಾರಿಗೆ, ಬೆಳಗಾವಿಯಲ್ಲಿ ಶಂಕುಸ್ಥಾಪನೆ ಮತ್ತು ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಸಮರ್ಪಿಸಲಿದ್ದಾರೆ. ಹಾಗೆ ಪಿಎಂ-ಕಿಸಾನ್ನ 13 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ರೈತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಪ್ರಧಾನಿಯವರು, 16,000 ಕೋಟಿಗಳನ್ನು 8 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡಲಿದ್ದಾರೆ.
ಯೋಜನೆಯಡಿ, ಅರ್ಹ ರೈತ ಕುಟುಂಬಗಳಿಗೆ ರೂ. 6000 ವರ್ಷಕ್ಕೆ ಮೂರು ಸಮಾನ ಕಂತುಗಳಲ್ಲಿ ತಲಾ ರೂ. 2000. ನೀಡಲಾಗುತ್ತದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…