ರೈತರ ನೀರಾವರಿ ವೆಚ್ಚ ಕಡಿತಗೊಳಿಸುವುದು ಹಾಗೂ ಡೀಸೆಲ್ ಪಂಪ್ಗಳ ಬದಲಿಗೆ ಸೌರ ಪಂಪ್ಗಳನ್ನು ಪ್ರೋತ್ಸಾಹಿಸುವುದು ಪ್ರಧಾನಮಂತ್ರಿ ಕುಸುಮ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಬಿ.ಪಿ. ಹರೀಶ್ ತಿಳಿಸಿದ್ದಾರೆ.
ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣಗೊಂಡ ಸೌರ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳ ಮೂಲಕ ರೈತರು ಆದಾಯ ದ್ವಿಗುಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಪಿಎಂ ಕುಸುಮ್ ಯೋಜನೆಯಡಿ ರೈತರು ಉತ್ಪಾದಿಸುವ ಹೆಚ್ಚುವರಿ ಸೌರ ವಿದ್ಯುತ್ನ್ನು ಸರ್ಕಾರಕ್ಕೆ ಮಾರಾಟ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಬಹುದು. ಜೊತೆಗೆ ಕಾರ್ಬನ್ ಹೊರಸೂಸುವಿಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಸಹಕಾರ ನೀಡುವುದು ಈ ಯೋಜನೆಯ ಮತ್ತೊಂದು ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…