ರೈತರ ನೀರಾವರಿ ವೆಚ್ಚ ಕಡಿತಗೊಳಿಸುವುದು ಹಾಗೂ ಡೀಸೆಲ್ ಪಂಪ್ಗಳ ಬದಲಿಗೆ ಸೌರ ಪಂಪ್ಗಳನ್ನು ಪ್ರೋತ್ಸಾಹಿಸುವುದು ಪ್ರಧಾನಮಂತ್ರಿ ಕುಸುಮ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಬಿ.ಪಿ. ಹರೀಶ್ ತಿಳಿಸಿದ್ದಾರೆ.
ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣಗೊಂಡ ಸೌರ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳ ಮೂಲಕ ರೈತರು ಆದಾಯ ದ್ವಿಗುಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಪಿಎಂ ಕುಸುಮ್ ಯೋಜನೆಯಡಿ ರೈತರು ಉತ್ಪಾದಿಸುವ ಹೆಚ್ಚುವರಿ ಸೌರ ವಿದ್ಯುತ್ನ್ನು ಸರ್ಕಾರಕ್ಕೆ ಮಾರಾಟ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಬಹುದು. ಜೊತೆಗೆ ಕಾರ್ಬನ್ ಹೊರಸೂಸುವಿಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಸಹಕಾರ ನೀಡುವುದು ಈ ಯೋಜನೆಯ ಮತ್ತೊಂದು ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…