ರೈತರ ನೀರಾವರಿ ವೆಚ್ಚ ಕಡಿತಗೊಳಿಸುವುದು ಹಾಗೂ ಡೀಸೆಲ್ ಪಂಪ್ಗಳ ಬದಲಿಗೆ ಸೌರ ಪಂಪ್ಗಳನ್ನು ಪ್ರೋತ್ಸಾಹಿಸುವುದು ಪ್ರಧಾನಮಂತ್ರಿ ಕುಸುಮ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಬಿ.ಪಿ. ಹರೀಶ್ ತಿಳಿಸಿದ್ದಾರೆ.
ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣಗೊಂಡ ಸೌರ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳ ಮೂಲಕ ರೈತರು ಆದಾಯ ದ್ವಿಗುಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಪಿಎಂ ಕುಸುಮ್ ಯೋಜನೆಯಡಿ ರೈತರು ಉತ್ಪಾದಿಸುವ ಹೆಚ್ಚುವರಿ ಸೌರ ವಿದ್ಯುತ್ನ್ನು ಸರ್ಕಾರಕ್ಕೆ ಮಾರಾಟ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಬಹುದು. ಜೊತೆಗೆ ಕಾರ್ಬನ್ ಹೊರಸೂಸುವಿಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಸಹಕಾರ ನೀಡುವುದು ಈ ಯೋಜನೆಯ ಮತ್ತೊಂದು ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…