Advertisement
Political mirror

ಉದ್ಯೋಗ ಸೃಷ್ಟಿಯತ್ತ ಸರ್ಕಾರ ಚಿತ್ತ | 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವಂತೆ ಸರ್ಕಾರಿ ಇಲಾಖೆಗಳಿಗೆ ಹಾಗೂ ಸಚಿವಾಲಯಗಳಿಗೆ ಪ್ರಧಾನಿ ಮೋದಿ ಸೂಚನೆ

Share

ಮೋದಿ ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ  ತಿಳಿಸಿದೆ. ಮಿಷನ್ ಮೋಡ್‌ನಲ್ಲಿ ನೇಮಕಾತಿಯನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ.

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ

ಈ ಹಿಂದೆ ಏಪ್ರಿಲ್‌ನಲ್ಲಿ, ಪಿಎಂ ಮೋದಿ ಅವರು ಉನ್ನತ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಕೇಳಿಕೊಂಡಿದ್ದರು ಇದರಿಂದ ಅವಕಾಶಗಳು ಸೃಷ್ಟಿಯಾಗುತ್ತವೆ. ಫೆಬ್ರವರಿಯಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, ಮಾರ್ಚ್ 1, 2020 ರವರೆಗೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 87 ಲಕ್ಷ ಹುದ್ದೆಗಳು ಖಾಲಿ ಇವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

11 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

12 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

12 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

15 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago