Advertisement
ಸುದ್ದಿಗಳು

ಆಸ್ಕರ್ ಗೆದ್ದ ನಾಟು, ನಾಟು ಸಾಂಗ್, RRR ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Share

RRR ಸಿನಿಮಾದ ನಾಟು, ನಾಟು ಸಾಂಗ್ 95ನೇ ಅಕಾಡೆಮಿ ಅವಾರ್ಡ್ಸ್ನಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ. ಅದಕ್ಕೆ ಪ್ರಧಾನಿ ಮೋದಿಯವರು ಚಿತ್ರತಂಡದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.

ಚಂದ್ರಬೋಸ್ ಅವರ ಸಾಹಿತ್ಯ, ರಾಹುಲ್ ಸಿಪ್ಲಿಗುಂಜ್, ಕಾಲ ಭೈರವ ಅವರ ಗಾಯನದೊಂದಿಗೆ ಎಂ.ಎಂ ಕೀರವಾಣಿ ಸಂಯೋಜಿಸಿದ ಹಾಡು ಮಾರ್ಚ್ 2022 ರಲ್ಲಿ ಬಿಡುಗಡೆ ಆಯಿತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಜನಪ್ರಿಯವಾಯಿತು.

ಆಸ್ಕರ್ ಗೆದ್ದ RRR ಚಿತ್ರತಂಡಕ್ಕೆ ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ವಿಶ್ ಮಾಡಿದ್ದಾರೆ. ‘ಅಸಾಧಾರಣ! ‘ನಾಟು ನಾಟುಜನಪ್ರಿಯತೆ ಜಾಗತಿಕವಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಇದು ಮುಂದಿನ ವರ್ಷಗಳಲ್ಲಿ ನೆನಪಿನಲ್ಲಿ ಉಳಿಯುವ ಹಾಡು. ಪ್ರತಿಷ್ಠಿತ ಗೌರವಕ್ಕಾಗಿ @mmkeeravaani, @boselyricist ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಭಾರತವು ಹರ್ಷಗೊಂಡಿದೆ. ಮತ್ತು ಹೆಮ್ಮೆ.’ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ ಲಭಿಸಿದ್ದು, ಅವರಿಗೆ ತುಂಬಾ ಖುಷಿಯಾಗಿದೆ. ಮೊದಲು ಹಾಡು ಗೋಲ್ಡನ್ ಗ್ಲೋಬ್ಸ್ ಸೇರಿ ಕೆಲವು ಪ್ರತಿಷ್ಠಿತ ಅವಾರ್ಡ್ ಪಡೆದುಕೊಂಡಿತ್ತು ಹಾಡಿಗೆ ಹೆಜ್ಜೆ ಹಾಕಿದ್ದ ನಟ ಜೂನಿಯರ್ ಎನ್ಟಿಆರ್, ರಾಮ್ ಚರಣ್ ಸಹ ತುಂಬಾ ಖುಷಿಯಾಗಿದ್ದಾರೆ. ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

24 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago