Advertisement
ಸುದ್ದಿಗಳು

ಆಸ್ಕರ್ ಗೆದ್ದ ನಾಟು, ನಾಟು ಸಾಂಗ್, RRR ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Share

RRR ಸಿನಿಮಾದ ನಾಟು, ನಾಟು ಸಾಂಗ್ 95ನೇ ಅಕಾಡೆಮಿ ಅವಾರ್ಡ್ಸ್ನಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ. ಅದಕ್ಕೆ ಪ್ರಧಾನಿ ಮೋದಿಯವರು ಚಿತ್ರತಂಡದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.

ಚಂದ್ರಬೋಸ್ ಅವರ ಸಾಹಿತ್ಯ, ರಾಹುಲ್ ಸಿಪ್ಲಿಗುಂಜ್, ಕಾಲ ಭೈರವ ಅವರ ಗಾಯನದೊಂದಿಗೆ ಎಂ.ಎಂ ಕೀರವಾಣಿ ಸಂಯೋಜಿಸಿದ ಹಾಡು ಮಾರ್ಚ್ 2022 ರಲ್ಲಿ ಬಿಡುಗಡೆ ಆಯಿತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಜನಪ್ರಿಯವಾಯಿತು.

ಆಸ್ಕರ್ ಗೆದ್ದ RRR ಚಿತ್ರತಂಡಕ್ಕೆ ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ವಿಶ್ ಮಾಡಿದ್ದಾರೆ. ‘ಅಸಾಧಾರಣ! ‘ನಾಟು ನಾಟುಜನಪ್ರಿಯತೆ ಜಾಗತಿಕವಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಇದು ಮುಂದಿನ ವರ್ಷಗಳಲ್ಲಿ ನೆನಪಿನಲ್ಲಿ ಉಳಿಯುವ ಹಾಡು. ಪ್ರತಿಷ್ಠಿತ ಗೌರವಕ್ಕಾಗಿ @mmkeeravaani, @boselyricist ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಭಾರತವು ಹರ್ಷಗೊಂಡಿದೆ. ಮತ್ತು ಹೆಮ್ಮೆ.’ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ ಲಭಿಸಿದ್ದು, ಅವರಿಗೆ ತುಂಬಾ ಖುಷಿಯಾಗಿದೆ. ಮೊದಲು ಹಾಡು ಗೋಲ್ಡನ್ ಗ್ಲೋಬ್ಸ್ ಸೇರಿ ಕೆಲವು ಪ್ರತಿಷ್ಠಿತ ಅವಾರ್ಡ್ ಪಡೆದುಕೊಂಡಿತ್ತು ಹಾಡಿಗೆ ಹೆಜ್ಜೆ ಹಾಕಿದ್ದ ನಟ ಜೂನಿಯರ್ ಎನ್ಟಿಆರ್, ರಾಮ್ ಚರಣ್ ಸಹ ತುಂಬಾ ಖುಷಿಯಾಗಿದ್ದಾರೆ. ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

41 minutes ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 hour ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

5 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

5 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

8 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

17 hours ago