ಉತ್ತರ ಪ್ರದೇಶ ಹೂಡಿಕೆದಾರರ ಶೃಂಗಸಭೆಯ ಶಿಲಾನ್ಯಾಸ ಸಮಾರಂಭ ಶುಕ್ರವಾರ ಲಕ್ನೋದಲ್ಲಿ ನಡೆಯಿತು. ಕಾರ್ಯಕಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಸಂದರ್ಭ 80,000 ಕೋಟಿ ರೂ.ಗೂ ಹೆಚ್ಚು ಮೊತ್ತದ 1,406 ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಈ ಹೂಡಿಕೆಯು ಉತ್ತರ ಪ್ರದೇಶದಲ್ಲಿ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.
ಈ ಯೋಜನೆಗಳಲ್ಲಿ ಯೋಜನೆಗಳು ಕೃಷಿ , ಐಟಿ ಮತ್ತು ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ, ಫಾರ್ಮಾ, ಪ್ರವಾಸೋದ್ಯಮ, ರಕ್ಷಣಾ ಮತ್ತು ಏರೋಸ್ಪೇಸ್, ಕೈಮಗ್ಗ ಮತ್ತು ಜವಳಿ ಮುಂತಾದ ವಲಯಗಳನ್ನು ಒಳಗೊಂಡಿದೆ.
ಮೊದಲ ಯುಪಿ ಹೂಡಿಕೆದಾರರ ಶೃಂಗಸಭೆಯನ್ನು 2018 ರಲ್ಲಿ ಮತ್ತು ಎರಡನೆಯದು 2019 ರಲ್ಲಿ ನಡೆಸಲಾಯಿತು. ಮೊದಲ ಶೃಂಗಸಭೆಯಲ್ಲಿ, 61,500 ಕೋಟಿ ರೂಪಾಯಿಗಿಂತ ಹೆಚ್ಚು ಮೌಲ್ಯದ 81 ಯೋಜನೆಗಳನ್ನು ಪ್ರಾರಂಭಿಸಲಾಯಿತು.ಎರಡನೇ ಶೃಂಗಸಭೆಯಲ್ಲಿ 67,000 ಕೋಟಿ ರೂಪಾಯಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ 290 ಯೋಜನೆಗಳನ್ನು ಪ್ರಾರಂಭಿಸಲಾಯಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…