ಸುದ್ದಿಗಳು

ಚುನಾವಣಾ ಕಣ | ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲು ತಂತ್ರ | 20 ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ರಾಜಕೀಯ ಪಕ್ಷಗಳು ಚುನಾವಣೆ ರ್‍ಯಾಲಿಗಳನ್ನು ನಡೆಸಿ ಮತದಾರರನ್ನು ಸೆಳೆಯಲು ಮುಂದಾಗುತ್ತಿವೆ. ಇದೇ ವೇಳೆ ಬಿಜೆಪಿ ಸಹ ತಮ್ಮ ಪಕ್ಷದ ಸ್ಟಾರ್ ಐಕಾನ್ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಮುಂದಾಗಿದೆ.

Advertisement
Advertisement

ಮೇ10ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಪ್ರಧಾನಿ ಮೋದಿ ಕರ್ನಾಟಕದಲ್ಲಿ 15-20 ರ್‍ಯಾಲಿಗಳಲ್ಲಿ ಭಾಗಿಯಾಗುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿರುವ ಬಿಜೆಪಿಯು ‘ಡಬಲ್ ಇಂಜಿನ್ ಸರ್ಕಾರದ’ ಅಡಿಯಲ್ಲಿ ಮಾಡಲಾಗಿರುವ ಅಭಿವೃದ್ಧಿ ಕೆಲಸಗಳ ಮುಖೇನ ಮತದಾರರ ಮುಂದೆ ಬರಲಿದೆ.

ಪ್ರಧಾನಿ ಮೋದಿ ಈ ವಾರಾಂತ್ಯದಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಇನ್ನು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬಳಿಕ ಪ್ರಧಾನಿ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದು ಇದು ಮೊದಲ ಭೇಟಿಯಾಗಿದ್ದು ಈ ವರ್ಷದಲ್ಲಿ ಇದು ರಾಜ್ಯಕ್ಕೆ ಎಂಟನೇ ಭೇಟಿಯಾಗಲಿದೆ.

ರಾಜ್ಯದಲ್ಲಿ ಪಕ್ಷಕ್ಕೆ ಪ್ರಬಲವಾದ ಸಂಘಟನಾ ನೆಲೆ ಇದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರದ ಬದ್ಧತೆಯೇ ನಮಗೆ ಎದ್ದುಕಾಣುವ ದೊಡ್ಡ ಅಂಶವಾಗಿದ್ದು ಇದು ರಾಜ್ಯದಲ್ಲಿ ಶಾಂತಿ ಮತ್ತು ಅಭಿವೃದ್ಧಿಯೊಂದಿಗೆ ಜೊತೆಯಲ್ಲಿ ಸಾಗುವಂತೆ ಮಾಡಿದೆ ಎಂದು ಕರ್ನಾಟಕ ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಸಹ ಪ್ರಭಾರಿಗಳಾಗಿದ್ದಾರೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಪ್ರಚಾರ ಸಮಿತಿಯ ನೇತೃತ್ವ ವಹಿಸಿದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಇದೆ. ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಮತ ಎಣಿಕೆ ಮೇ 13ರಂದು ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

3 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

3 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

5 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

5 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

5 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

10 hours ago