Advertisement
ಸುದ್ದಿಗಳು

ಚುನಾವಣಾ ಕಣ | ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲು ತಂತ್ರ | 20 ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ |

Share

ಕರ್ನಾಟಕ ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ರಾಜಕೀಯ ಪಕ್ಷಗಳು ಚುನಾವಣೆ ರ್‍ಯಾಲಿಗಳನ್ನು ನಡೆಸಿ ಮತದಾರರನ್ನು ಸೆಳೆಯಲು ಮುಂದಾಗುತ್ತಿವೆ. ಇದೇ ವೇಳೆ ಬಿಜೆಪಿ ಸಹ ತಮ್ಮ ಪಕ್ಷದ ಸ್ಟಾರ್ ಐಕಾನ್ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಮುಂದಾಗಿದೆ.

ಮೇ10ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಪ್ರಧಾನಿ ಮೋದಿ ಕರ್ನಾಟಕದಲ್ಲಿ 15-20 ರ್‍ಯಾಲಿಗಳಲ್ಲಿ ಭಾಗಿಯಾಗುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿರುವ ಬಿಜೆಪಿಯು ‘ಡಬಲ್ ಇಂಜಿನ್ ಸರ್ಕಾರದ’ ಅಡಿಯಲ್ಲಿ ಮಾಡಲಾಗಿರುವ ಅಭಿವೃದ್ಧಿ ಕೆಲಸಗಳ ಮುಖೇನ ಮತದಾರರ ಮುಂದೆ ಬರಲಿದೆ.

ಪ್ರಧಾನಿ ಮೋದಿ ಈ ವಾರಾಂತ್ಯದಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಇನ್ನು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬಳಿಕ ಪ್ರಧಾನಿ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದು ಇದು ಮೊದಲ ಭೇಟಿಯಾಗಿದ್ದು ಈ ವರ್ಷದಲ್ಲಿ ಇದು ರಾಜ್ಯಕ್ಕೆ ಎಂಟನೇ ಭೇಟಿಯಾಗಲಿದೆ.

ರಾಜ್ಯದಲ್ಲಿ ಪಕ್ಷಕ್ಕೆ ಪ್ರಬಲವಾದ ಸಂಘಟನಾ ನೆಲೆ ಇದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರದ ಬದ್ಧತೆಯೇ ನಮಗೆ ಎದ್ದುಕಾಣುವ ದೊಡ್ಡ ಅಂಶವಾಗಿದ್ದು ಇದು ರಾಜ್ಯದಲ್ಲಿ ಶಾಂತಿ ಮತ್ತು ಅಭಿವೃದ್ಧಿಯೊಂದಿಗೆ ಜೊತೆಯಲ್ಲಿ ಸಾಗುವಂತೆ ಮಾಡಿದೆ ಎಂದು ಕರ್ನಾಟಕ ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಸಹ ಪ್ರಭಾರಿಗಳಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಪ್ರಚಾರ ಸಮಿತಿಯ ನೇತೃತ್ವ ವಹಿಸಿದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಇದೆ. ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಮತ ಎಣಿಕೆ ಮೇ 13ರಂದು ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago