Advertisement
ಸುದ್ದಿಗಳು

ಚುನಾವಣಾ ಕಣ | ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲು ತಂತ್ರ | 20 ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ |

Share

ಕರ್ನಾಟಕ ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ರಾಜಕೀಯ ಪಕ್ಷಗಳು ಚುನಾವಣೆ ರ್‍ಯಾಲಿಗಳನ್ನು ನಡೆಸಿ ಮತದಾರರನ್ನು ಸೆಳೆಯಲು ಮುಂದಾಗುತ್ತಿವೆ. ಇದೇ ವೇಳೆ ಬಿಜೆಪಿ ಸಹ ತಮ್ಮ ಪಕ್ಷದ ಸ್ಟಾರ್ ಐಕಾನ್ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಮುಂದಾಗಿದೆ.

ಮೇ10ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಪ್ರಧಾನಿ ಮೋದಿ ಕರ್ನಾಟಕದಲ್ಲಿ 15-20 ರ್‍ಯಾಲಿಗಳಲ್ಲಿ ಭಾಗಿಯಾಗುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿರುವ ಬಿಜೆಪಿಯು ‘ಡಬಲ್ ಇಂಜಿನ್ ಸರ್ಕಾರದ’ ಅಡಿಯಲ್ಲಿ ಮಾಡಲಾಗಿರುವ ಅಭಿವೃದ್ಧಿ ಕೆಲಸಗಳ ಮುಖೇನ ಮತದಾರರ ಮುಂದೆ ಬರಲಿದೆ.

ಪ್ರಧಾನಿ ಮೋದಿ ಈ ವಾರಾಂತ್ಯದಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಇನ್ನು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬಳಿಕ ಪ್ರಧಾನಿ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದು ಇದು ಮೊದಲ ಭೇಟಿಯಾಗಿದ್ದು ಈ ವರ್ಷದಲ್ಲಿ ಇದು ರಾಜ್ಯಕ್ಕೆ ಎಂಟನೇ ಭೇಟಿಯಾಗಲಿದೆ.

ರಾಜ್ಯದಲ್ಲಿ ಪಕ್ಷಕ್ಕೆ ಪ್ರಬಲವಾದ ಸಂಘಟನಾ ನೆಲೆ ಇದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರದ ಬದ್ಧತೆಯೇ ನಮಗೆ ಎದ್ದುಕಾಣುವ ದೊಡ್ಡ ಅಂಶವಾಗಿದ್ದು ಇದು ರಾಜ್ಯದಲ್ಲಿ ಶಾಂತಿ ಮತ್ತು ಅಭಿವೃದ್ಧಿಯೊಂದಿಗೆ ಜೊತೆಯಲ್ಲಿ ಸಾಗುವಂತೆ ಮಾಡಿದೆ ಎಂದು ಕರ್ನಾಟಕ ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಸಹ ಪ್ರಭಾರಿಗಳಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಪ್ರಚಾರ ಸಮಿತಿಯ ನೇತೃತ್ವ ವಹಿಸಿದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಇದೆ. ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಮತ ಎಣಿಕೆ ಮೇ 13ರಂದು ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago