ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

April 28, 2025
7:02 AM

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಪ್ರಸ್ತಾಪಿಸಿದ್ದಾರೆ.

ಬಾಗಲಕೋಟೆಯ ನಿವಾಸಿ ಶ್ರೀಶೈಲ್ ತೇಲಿ ಅವರು 35 ಡಿಗ್ರಿಗಿಂತ ಅಧಿಕ ತಾಪಮಾನವಿರುವ ಬಯಲು ಪ್ರದೇಶದಲ್ಲಿ ಸೇಬು ಬೆಳೆದಿರುವ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ರೈತ ಶ್ರೀಶೈಲ ತೇಲಿ ತಮ್ಮ ಏಳು ಎಕರೆ ಜಮೀನಿನಲ್ಲಿ ಸಾವಯವ ವಿಧಾನದಿಂದ ಸೇಬು ಬೆಳೆದು ಅವರು ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಈ ಯಶಸ್ಸಿನಿಂದ ಇತರ ರೈತರಿಗೆ ಸ್ಪೂರ್ತಿಯಾಗಿದ್ದು, ಸೇಬು ಕೃಷಿಯ ಬಗ್ಗೆ ಅವರು ಜಾಗೃತಿ ಮೂಡಿಸುತ್ತಿದ್ದಾರೆ.  ಕಬ್ಬು ಹೆಚ್ಚಾಗಿ ಬೆಳೆಯುವ ಈ ನಾಡಲ್ಲಿ ಸಮೃದ್ಧವಾಗಿ ಸೇಬು ಬೆಳೆದು ಜನರಿಗೆ ಸೇಬಿನ ಸಿಹಿ ಹಂಚುತ್ತಿದ್ದಾರೆ.  ಬಾಗಲಕೋಟೆ, ಬೆಳಗಾವಿ, ವಿಜಯಪುರದ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಕೈ ತುಂಬ ಆದಾಯ ಪಡೆಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಆಕಾಶವಾಣಿಯೊಂದಿಗೆ ಶ್ರೀಶೈಲ ತೇಲಿ ಸಂತಸ  ಹಂಚಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror