ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ ಪ್ರಸ್ತಾಪಿಸಿದ್ದಾರೆ.
ಬಾಗಲಕೋಟೆಯ ನಿವಾಸಿ ಶ್ರೀಶೈಲ್ ತೇಲಿ ಅವರು 35 ಡಿಗ್ರಿಗಿಂತ ಅಧಿಕ ತಾಪಮಾನವಿರುವ ಬಯಲು ಪ್ರದೇಶದಲ್ಲಿ ಸೇಬು ಬೆಳೆದಿರುವ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ರೈತ ಶ್ರೀಶೈಲ ತೇಲಿ ತಮ್ಮ ಏಳು ಎಕರೆ ಜಮೀನಿನಲ್ಲಿ ಸಾವಯವ ವಿಧಾನದಿಂದ ಸೇಬು ಬೆಳೆದು ಅವರು ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಈ ಯಶಸ್ಸಿನಿಂದ ಇತರ ರೈತರಿಗೆ ಸ್ಪೂರ್ತಿಯಾಗಿದ್ದು, ಸೇಬು ಕೃಷಿಯ ಬಗ್ಗೆ ಅವರು ಜಾಗೃತಿ ಮೂಡಿಸುತ್ತಿದ್ದಾರೆ. ಕಬ್ಬು ಹೆಚ್ಚಾಗಿ ಬೆಳೆಯುವ ಈ ನಾಡಲ್ಲಿ ಸಮೃದ್ಧವಾಗಿ ಸೇಬು ಬೆಳೆದು ಜನರಿಗೆ ಸೇಬಿನ ಸಿಹಿ ಹಂಚುತ್ತಿದ್ದಾರೆ. ಬಾಗಲಕೋಟೆ, ಬೆಳಗಾವಿ, ವಿಜಯಪುರದ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಕೈ ತುಂಬ ಆದಾಯ ಪಡೆಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ನಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಆಕಾಶವಾಣಿಯೊಂದಿಗೆ ಶ್ರೀಶೈಲ ತೇಲಿ ಸಂತಸ ಹಂಚಿಕೊಂಡಿದ್ದಾರೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…