Advertisement
MIRROR FOCUS

ಪುತ್ತೂರಿನ ಎರಡು ಗೇರು ತಳಿಗಳಿಗೆ ರಾಷ್ಟ್ರಮಟ್ಟದ ಮನ್ನಣೆ ಭಾಗ್ಯ : ತಳಿ ಬಿಡುಗಡೆಗೊಳಿಸಲಿದ್ದಾರೆ ಪ್ರಧಾನಿ ಮೋದಿ

Share

ಪುತ್ತೂರಿನ(Puttur) ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ (National cashew research center) ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1(Netra jambo-1 ಮತ್ತು ನೇತ್ರಾ ಗಂಗಾ(Netra ganga) ತಳಿಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ಅವರಿಂದ ಆಗಸ್ಟ್ ಎರಡನೇ ವಾರ ವಿವಿಧ ವಾರ್ಷಿಕ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ, ಪೋಷಕಾಂಶ ಸಮೃದ್ಧ ತಳಿಗಳು ಲೋಕಾರ್ಪಣೆಗೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

ಇದು ಕೇಂದ್ರ ಸರ್ಕಾರ 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಅಂಗವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಸೇರಿಕೊಂಡಿವೆ. ನೇತ್ರಾ ಜಂಬೋ-1 ತಳಿಯನ್ನು ಸಂಸ್ಥೆಯ ಈಗಿನ ನಿರ್ದೇಶಕರಾದ ಡಾ.ದಿನಕರ ಅಡಿಗ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಈ ತಳಿ ಕೂಲಿ ಖರ್ಚನ್ನು ಗಮನಾರ್ಹ ಪ್ರಮಾಣದಲ್ಲಿ ಉಳಿಸುತ್ತದೆ. ಇದರಲ್ಲಿ 12 ಗ್ರಾಂ ತೂಕದ ಬೀಜಗಳಿರುತ್ತವೆ. ಶೇಕಡಾ 90ಕ್ಕೂ ಹೆಚ್ಚಿನ ಬೀಜಗಳದ್ದು ಒಂದೇ ಗಾತ್ರ. ನೂರು ಕೆಜಿ ಬೀಜ ಸಂಸ್ಕರಣೆಯಿಂದ ಸುಮಾರು 29 ರಿಂದ 30 ಕೆಜಿ ತಿರುಳು ಸಿಗುತ್ತದೆ. ಈಗಿರುವ ರಫ್ತು ಗುಣಮಟ್ಟದ ಗ್ರೇಡ್ ಡಬ್ಲ್ಯೂ 180ಕ್ಕಿಂತ ಜಾಸ್ತಿ ಗ್ರೇಡ್ (ಡಬ್ಲ್ಯೂ 130) ಈ ತಳಿಯ ತಿರುಳಿನದ್ದು ಆಗಿದೆ.

ಈಗಿನ ಮಾರುಕಟ್ಟೆ ದರದಲ್ಲಿ ದೊಡ್ಡ ಗಾತ್ರದ ಬೀಜಕ್ಕೆ ಒಂದು ಟನ್ನಿಗೆ ಸುಮಾರು 10,000 ರೂ ಜಾಸ್ತಿ ಸಿಗುತ್ತದೆ. ಒಟ್ಟು 26000 ರೂ. ಗಳಷ್ಟು ಹೆಚ್ಚುವರಿ ಲಾಭ ಒಂದು ಟನ್ನಿಗೆ ಸಿಗುತ್ತದೆ. ಇದರ ತಿರುಳಿನ ಸಿಪ್ಪೆ ಸುಲಭದಲ್ಲಿ ಬಿಡಿಸಬಹುದು. ಹಾಗಾಗಿ ಕಾರ್ಖಾನೆಯಲ್ಲೂ ಕೂಲಿ ಖರ್ಚು ಉಳಿಸುತ್ತದೆ. ಜೊತೆಗೆ ತಿರುಳು ತುಂಬಾ ರುಚಿಕರವಾಗಿದೆ ಎಂಬುದು ತಿಳಿದುಬಂದಿದೆ.

ನೇತ್ರಾ ಗಂಗಾ ತಳಿಯನ್ನು ಹಿಂದಿನ ಪ್ರಭಾರ ನಿರ್ದೇಶಕರಾದ ಡಾ.ಗಂಗಾಧರ ನಾಯಕ್ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಇದು ದೊಡ್ಡ ಗಾತ್ರದ ಬೀಜವನ್ನು (12 ರಿಂದ 13 ಗ್ರಾಂ), ಗೊಂಚಲುಗಳಲ್ಲಿ ಬಿಡುವ ತಳಿಯಾಗಿದ್ದು ಉತ್ತಮ ಫಸಲನ್ನು ಕೊಡುತ್ತದೆ. ಪ್ರಾರಂಭದ ಒಂದೆರಡು ವರ್ಷಗಳಲ್ಲೇ ಹೂ ಬಿಡುವ ಹಾಗೂ ದೀರ್ಘಾವಧಿ (ಡಿಸೆಂಬರ್ ನಿಂದ ಏಪ್ರಿಲ್ ತನಕ) ಹೂವು ಮತ್ತು ಗೇರು ಬೀಜ ಬಿಡುವ ತಳಿ. ತಿರುಳಿನ ಪ್ರಮಾಣ ಶೇಕಡಾ 29.5% ಇರುತ್ತದೆ. ಮೂರನೆ ವರ್ಷದಲ್ಲಿಯೇ ಗಿಡವೊಂದಕ್ಕೆ 5 ಕೆಜಿಗಿಂತ ಮೇಲ್ಪಟ್ಟು ಇಳುವರಿ ಕೊಡುತ್ತದೆ. ಗೇರಿನಲ್ಲಿ ಸದ್ಯ ಕೃಷಿ ಮಾಡುತ್ತಿರುವ ತಳಿಗಳು (ಭಾಸ್ಕರ, ವಿಆರ್​ಐ-3, ಉಳ್ಳಾಲ -3 ಇತ್ಯಾದಿ) ಬಹುತೇಕ ಸಣ್ಣ ಹಾಗೂ ಮಧ್ಯಮ ಗಾತ್ರದವು. ಹಾಗಾಗಿ ಈ ದೊಡ್ಡ ಗಾತ್ರದ ಬೀಜದ ತಳಿಗಳು ಒಣಭೂಮಿ ಕೃಷಿಯಲ್ಲಿ ಹೊಸ ಭರವಸೆ ಹುಟ್ಟಿಸಬಲ್ಲವು ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

4 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

5 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

12 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

18 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

18 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago