Advertisement
ರಾಷ್ಟ್ರೀಯ

ಕೊರೋನಾ ನಿಯಂತ್ರಣ | ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ | ಎಲ್ಲರಿಗೂ ಲಸಿಕೆ ನೀಡುವತ್ತ ಗಮನ ಹರಿಸಲು ಸೂಚನೆ |

Share

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದರು. ಬಳಿಕ ಮಾತನಾಡಿ  ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆ ವಿತರಣೆಗೆ ವೇಗ ನೀಡುವಂತೆ ಕರೆ ನೀಡಿದರು. ಸಣ್ಣ ಮಕ್ಕಳು ಸೇರಿದಂತೆ ಎಲ್ಲರಿಗೂ ಲಸಿಕೆ ನೀಡುವತ್ತ ಗಮನ ಹರಿಸುವಂತೆ ಸೂಚನೆ ನೀಡಿದರು.

ಕೊರೋನಾ ವೈರಸ್ ದೂರ ಹೋಗಿದೆ ಎನ್ನುವ ಮನೋಭಾವವನ್ನು ಜನರು ಬಿಡಬೇಕು. ಭಾರತದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಉಪ ಪ್ರಬೇಧವು ಹೊಸ ಸವಾಲನ್ನು ತಂದೊಡ್ಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೋವಿಡ್ ಸವಾಲು ಇನ್ನೂ ಮೀರಿಲ್ಲ ಎಂದು ಎಚ್ಚರಿಸಿದ್ದಾರೆ. ಇತರ ದೇಶಗಳಿಗೆ ಹೋಲಿಸಿದರೆ ಕೋವಿಡ್ ಬಿಕ್ಕಟ್ಟನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದರೂ, ನಾವು ಈಗ ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ. ನಾವು ಜಾಗರೂಕರಾಗಿರಬೇಕು ಎಂದು ಮೋದಿ ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-ಸೂಕ್ತ ನಿಯಂತ್ರಣಾ ಕ್ರಮಗಳನ್ನು  ಹಾಗೂ ಅಗತ್ಯವನ್ನು ತಿಳಿಸಬೇಕಾಗಿದೆ ಎಂದರು. ಕೋವಿಡ್ ನಿಯಮಗಳನ್ನು ದೇಶಾದ್ಯಂತ ಜನತೆ ಕಡ್ಡಾಯವಾಗಿ ಪಾಲನೆ ಮಾಡಬೇಕುಕ ಎಂದು ಮನವಿ ಮಾಡಿದರು. ಸರ್ಕಾರಗಳು  ಕೋವಿಡ್ ಟೆಸ್ಟಿಂಗ್, ಟ್ರ್ಯಾಕಿಂಗ್ ಹಾಗೂ ಟ್ರೀಟ್‌ಮೆಂಟ್‌ಗೆ ಹೆಚ್ಚಿನ ಒತ್ತು ನೀಡುವಂತೆ ಪ್ರಧಾನಿ ಮೋದಿ ಸಲಹೆ ನೀಡಿದರು.

ಸಭೆಯಲ್ಲಿ  ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆಯಾ ಸಚಿವಾಲಯಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಪರಿಶೀಲನಾ ಸಭೆಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಛತ್ತೀಸ್‌ಗಢದ ಭೂಪೇಶ್ ಬಘೇಲ್ ಮತ್ತು ಪಂಜಾಬ್‌ನ ಭಗವಂತ್ ಮಾನ್ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಭಾರತವು 2,927 ಹೊಸ ಕೊರೋನಾ ವೈರಸ್ ಪ್ರಕರಣ ವರದಿಯಾಗಿದೆ.  ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 15,636 ರಿಂದ 16,279 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶವು 32 ಸಾವುಗಳ ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

17 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

22 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago