ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ | ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಬೆಂಗಾಲವಲು ಪಡೆ | ವಿಡಿಯೋ ವೈರಲ್‌ |

September 30, 2022
10:24 PM

ಶುಕ್ರವಾರ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಸ್ವಲ್ಪ ಹೊತ್ತು ನಿಂತಿತು. ಇದೀಗ ಈ  ವಿಡಿಯೋ ವೈರಲ್‌ ಆಗಿದೆ.

ಗುಜರಾತ್ ಬಿಜೆಪಿ ಮತ್ತುಸುದ್ದಿ ಸಂಸ್ಥೆ ಎಎನ್‌ಐ  ಹಂಚಿಕೊಂಡ ವೀಡಿಯೊ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಎರಡು ಕಾರುಗಳು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಅಹಮದಾಬಾದ್-ಗಾಂಧಿನಗರ ರಸ್ತೆಯಲ್ಲಿ ನಿಧಾನವಾಗಿ ಎಡಭಾಗಕ್ಕೆ ಚಲಿಸಿದೆ. ಅಹಮದಾಬಾದ್‌ನಲ್ಲಿ ಸಾರ್ವಜನಿಕ ರಾಲಿಯಲ್ಲಿ ಭಾಗವಹಿಸಿದ ಪ್ರಧಾನಿಗಳು ಅವರು ಅಲ್ಲಿಂದ ಗಾಂಧಿನಗರದ ರಾಜಭವನದತ್ತ ಹೊರಟಿದ್ದರು. ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರಧಾನಿಗಳ ವಾಹನಕ್ಕೆ ದಾರಿ ಮಾಡಿ ಕೊಡಲಾಗಿತ್ತು. ಈ ವೇಳೆ ಆಂಬುಲೆನ್ಸ್‌ ಒಂದು ಬಂದಿದ್ದು, ಅದಕ್ಕೆ ಪ್ರಧಾನಿ ಅವರ ರಕ್ಷಣೆಗಿದ್ದ ವಾಹನಗಳು ದಾರಿ ಮಾಡಿಕೊಟ್ಟಿವೆ.

ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರ ವಾಹನವನ್ನು ನಿಲ್ಲಿಸಲಾಯಿತು” ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ. ಗುಜರಾತ್ ಭೇಟಿಯ ಎರಡನೇ ದಿನದಂದು, ಪ್ರಧಾನಿ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು ಮತ್ತು ಅಹಮದಾಬಾದ್ ಮೆಟ್ರೋ ರೈಲು ಯೋಜನೆಗೆ ಮೊದಲ ಹಂತದ ಚಾಲನೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror