ಶುಕ್ರವಾರ ಅಹಮದಾಬಾದ್ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಸ್ವಲ್ಪ ಹೊತ್ತು ನಿಂತಿತು. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಗುಜರಾತ್ ಬಿಜೆಪಿ ಮತ್ತುಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ವೀಡಿಯೊ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಎರಡು ಕಾರುಗಳು ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಅಹಮದಾಬಾದ್-ಗಾಂಧಿನಗರ ರಸ್ತೆಯಲ್ಲಿ ನಿಧಾನವಾಗಿ ಎಡಭಾಗಕ್ಕೆ ಚಲಿಸಿದೆ. ಅಹಮದಾಬಾದ್ನಲ್ಲಿ ಸಾರ್ವಜನಿಕ ರಾಲಿಯಲ್ಲಿ ಭಾಗವಹಿಸಿದ ಪ್ರಧಾನಿಗಳು ಅವರು ಅಲ್ಲಿಂದ ಗಾಂಧಿನಗರದ ರಾಜಭವನದತ್ತ ಹೊರಟಿದ್ದರು. ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರಧಾನಿಗಳ ವಾಹನಕ್ಕೆ ದಾರಿ ಮಾಡಿ ಕೊಡಲಾಗಿತ್ತು. ಈ ವೇಳೆ ಆಂಬುಲೆನ್ಸ್ ಒಂದು ಬಂದಿದ್ದು, ಅದಕ್ಕೆ ಪ್ರಧಾನಿ ಅವರ ರಕ್ಷಣೆಗಿದ್ದ ವಾಹನಗಳು ದಾರಿ ಮಾಡಿಕೊಟ್ಟಿವೆ.
ಅಹಮದಾಬಾದ್ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಅಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರ ವಾಹನವನ್ನು ನಿಲ್ಲಿಸಲಾಯಿತು” ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ. ಗುಜರಾತ್ ಭೇಟಿಯ ಎರಡನೇ ದಿನದಂದು, ಪ್ರಧಾನಿ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು ಮತ್ತು ಅಹಮದಾಬಾದ್ ಮೆಟ್ರೋ ರೈಲು ಯೋಜನೆಗೆ ಮೊದಲ ಹಂತದ ಚಾಲನೆ ನೀಡಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…