Advertisement
ಸುದ್ದಿಗಳು

ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ | ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಬೆಂಗಾಲವಲು ಪಡೆ | ವಿಡಿಯೋ ವೈರಲ್‌ |

Share

ಶುಕ್ರವಾರ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಸ್ವಲ್ಪ ಹೊತ್ತು ನಿಂತಿತು. ಇದೀಗ ಈ  ವಿಡಿಯೋ ವೈರಲ್‌ ಆಗಿದೆ.

ಗುಜರಾತ್ ಬಿಜೆಪಿ ಮತ್ತುಸುದ್ದಿ ಸಂಸ್ಥೆ ಎಎನ್‌ಐ  ಹಂಚಿಕೊಂಡ ವೀಡಿಯೊ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಎರಡು ಕಾರುಗಳು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಅಹಮದಾಬಾದ್-ಗಾಂಧಿನಗರ ರಸ್ತೆಯಲ್ಲಿ ನಿಧಾನವಾಗಿ ಎಡಭಾಗಕ್ಕೆ ಚಲಿಸಿದೆ. ಅಹಮದಾಬಾದ್‌ನಲ್ಲಿ ಸಾರ್ವಜನಿಕ ರಾಲಿಯಲ್ಲಿ ಭಾಗವಹಿಸಿದ ಪ್ರಧಾನಿಗಳು ಅವರು ಅಲ್ಲಿಂದ ಗಾಂಧಿನಗರದ ರಾಜಭವನದತ್ತ ಹೊರಟಿದ್ದರು. ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರಧಾನಿಗಳ ವಾಹನಕ್ಕೆ ದಾರಿ ಮಾಡಿ ಕೊಡಲಾಗಿತ್ತು. ಈ ವೇಳೆ ಆಂಬುಲೆನ್ಸ್‌ ಒಂದು ಬಂದಿದ್ದು, ಅದಕ್ಕೆ ಪ್ರಧಾನಿ ಅವರ ರಕ್ಷಣೆಗಿದ್ದ ವಾಹನಗಳು ದಾರಿ ಮಾಡಿಕೊಟ್ಟಿವೆ.

ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರ ವಾಹನವನ್ನು ನಿಲ್ಲಿಸಲಾಯಿತು” ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ. ಗುಜರಾತ್ ಭೇಟಿಯ ಎರಡನೇ ದಿನದಂದು, ಪ್ರಧಾನಿ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು ಮತ್ತು ಅಹಮದಾಬಾದ್ ಮೆಟ್ರೋ ರೈಲು ಯೋಜನೆಗೆ ಮೊದಲ ಹಂತದ ಚಾಲನೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

1 hour ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

2 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

7 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

11 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago