Advertisement
ಸುದ್ದಿಗಳು

ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ | ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಬೆಂಗಾಲವಲು ಪಡೆ | ವಿಡಿಯೋ ವೈರಲ್‌ |

Share

ಶುಕ್ರವಾರ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಸ್ವಲ್ಪ ಹೊತ್ತು ನಿಂತಿತು. ಇದೀಗ ಈ  ವಿಡಿಯೋ ವೈರಲ್‌ ಆಗಿದೆ.

Advertisement
Advertisement

ಗುಜರಾತ್ ಬಿಜೆಪಿ ಮತ್ತುಸುದ್ದಿ ಸಂಸ್ಥೆ ಎಎನ್‌ಐ  ಹಂಚಿಕೊಂಡ ವೀಡಿಯೊ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಎರಡು ಕಾರುಗಳು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಅಹಮದಾಬಾದ್-ಗಾಂಧಿನಗರ ರಸ್ತೆಯಲ್ಲಿ ನಿಧಾನವಾಗಿ ಎಡಭಾಗಕ್ಕೆ ಚಲಿಸಿದೆ. ಅಹಮದಾಬಾದ್‌ನಲ್ಲಿ ಸಾರ್ವಜನಿಕ ರಾಲಿಯಲ್ಲಿ ಭಾಗವಹಿಸಿದ ಪ್ರಧಾನಿಗಳು ಅವರು ಅಲ್ಲಿಂದ ಗಾಂಧಿನಗರದ ರಾಜಭವನದತ್ತ ಹೊರಟಿದ್ದರು. ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರಧಾನಿಗಳ ವಾಹನಕ್ಕೆ ದಾರಿ ಮಾಡಿ ಕೊಡಲಾಗಿತ್ತು. ಈ ವೇಳೆ ಆಂಬುಲೆನ್ಸ್‌ ಒಂದು ಬಂದಿದ್ದು, ಅದಕ್ಕೆ ಪ್ರಧಾನಿ ಅವರ ರಕ್ಷಣೆಗಿದ್ದ ವಾಹನಗಳು ದಾರಿ ಮಾಡಿಕೊಟ್ಟಿವೆ.

Advertisement

ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರ ವಾಹನವನ್ನು ನಿಲ್ಲಿಸಲಾಯಿತು” ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ. ಗುಜರಾತ್ ಭೇಟಿಯ ಎರಡನೇ ದಿನದಂದು, ಪ್ರಧಾನಿ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು ಮತ್ತು ಅಹಮದಾಬಾದ್ ಮೆಟ್ರೋ ರೈಲು ಯೋಜನೆಗೆ ಮೊದಲ ಹಂತದ ಚಾಲನೆ ನೀಡಿದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

7 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

8 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago