ಶುಕ್ರವಾರ ಅಹಮದಾಬಾದ್ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಸ್ವಲ್ಪ ಹೊತ್ತು ನಿಂತಿತು. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಗುಜರಾತ್ ಬಿಜೆಪಿ ಮತ್ತುಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ವೀಡಿಯೊ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಎರಡು ಕಾರುಗಳು ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಅಹಮದಾಬಾದ್-ಗಾಂಧಿನಗರ ರಸ್ತೆಯಲ್ಲಿ ನಿಧಾನವಾಗಿ ಎಡಭಾಗಕ್ಕೆ ಚಲಿಸಿದೆ. ಅಹಮದಾಬಾದ್ನಲ್ಲಿ ಸಾರ್ವಜನಿಕ ರಾಲಿಯಲ್ಲಿ ಭಾಗವಹಿಸಿದ ಪ್ರಧಾನಿಗಳು ಅವರು ಅಲ್ಲಿಂದ ಗಾಂಧಿನಗರದ ರಾಜಭವನದತ್ತ ಹೊರಟಿದ್ದರು. ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರಧಾನಿಗಳ ವಾಹನಕ್ಕೆ ದಾರಿ ಮಾಡಿ ಕೊಡಲಾಗಿತ್ತು. ಈ ವೇಳೆ ಆಂಬುಲೆನ್ಸ್ ಒಂದು ಬಂದಿದ್ದು, ಅದಕ್ಕೆ ಪ್ರಧಾನಿ ಅವರ ರಕ್ಷಣೆಗಿದ್ದ ವಾಹನಗಳು ದಾರಿ ಮಾಡಿಕೊಟ್ಟಿವೆ.
ಅಹಮದಾಬಾದ್ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಅಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರ ವಾಹನವನ್ನು ನಿಲ್ಲಿಸಲಾಯಿತು” ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ. ಗುಜರಾತ್ ಭೇಟಿಯ ಎರಡನೇ ದಿನದಂದು, ಪ್ರಧಾನಿ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು ಮತ್ತು ಅಹಮದಾಬಾದ್ ಮೆಟ್ರೋ ರೈಲು ಯೋಜನೆಗೆ ಮೊದಲ ಹಂತದ ಚಾಲನೆ ನೀಡಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…