ಶುಕ್ರವಾರ ಅಹಮದಾಬಾದ್ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಸ್ವಲ್ಪ ಹೊತ್ತು ನಿಂತಿತು. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಗುಜರಾತ್ ಬಿಜೆಪಿ ಮತ್ತುಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ವೀಡಿಯೊ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಎರಡು ಕಾರುಗಳು ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಅಹಮದಾಬಾದ್-ಗಾಂಧಿನಗರ ರಸ್ತೆಯಲ್ಲಿ ನಿಧಾನವಾಗಿ ಎಡಭಾಗಕ್ಕೆ ಚಲಿಸಿದೆ. ಅಹಮದಾಬಾದ್ನಲ್ಲಿ ಸಾರ್ವಜನಿಕ ರಾಲಿಯಲ್ಲಿ ಭಾಗವಹಿಸಿದ ಪ್ರಧಾನಿಗಳು ಅವರು ಅಲ್ಲಿಂದ ಗಾಂಧಿನಗರದ ರಾಜಭವನದತ್ತ ಹೊರಟಿದ್ದರು. ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರಧಾನಿಗಳ ವಾಹನಕ್ಕೆ ದಾರಿ ಮಾಡಿ ಕೊಡಲಾಗಿತ್ತು. ಈ ವೇಳೆ ಆಂಬುಲೆನ್ಸ್ ಒಂದು ಬಂದಿದ್ದು, ಅದಕ್ಕೆ ಪ್ರಧಾನಿ ಅವರ ರಕ್ಷಣೆಗಿದ್ದ ವಾಹನಗಳು ದಾರಿ ಮಾಡಿಕೊಟ್ಟಿವೆ.
ಅಹಮದಾಬಾದ್ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಅಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರ ವಾಹನವನ್ನು ನಿಲ್ಲಿಸಲಾಯಿತು” ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ. ಗುಜರಾತ್ ಭೇಟಿಯ ಎರಡನೇ ದಿನದಂದು, ಪ್ರಧಾನಿ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು ಮತ್ತು ಅಹಮದಾಬಾದ್ ಮೆಟ್ರೋ ರೈಲು ಯೋಜನೆಗೆ ಮೊದಲ ಹಂತದ ಚಾಲನೆ ನೀಡಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…