Advertisement
ಸುದ್ದಿಗಳು

ನನ್ನ ಕಚೇರಿಯಲ್ಲಿರುವ ಪ್ರಧಾನಿ ಮೋದಿ ಫೋಟೋ ತೆಗೆಯೋಲ್ಲ, ಅದು ನನ್ನ ಸಂಸ್ಕೃತಿಯಲ್ಲ- ಜಗದೀಶ್ ಶೆಟ್ಟರ್

Share

ಕಾಂಗ್ರೆಸ್ ಪಕ್ಷಕ್ಕೆ ಹೈಜಂಪ್​​ ಮಾಡಿದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಾಲಿ ಹಿರಿಯ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ದಶಕಗಳಿಂದಲೂ ತಾನು ಸೇವೆ ಸಲ್ಲಿಸಿದ ಭಾರತೀಯ ಜನತಾ ಪಕ್ಷವು  ಹಾಲಿ ಅಸೆಂಬ್ಲಿ ಚುನಾವಣೆ  ಹಿನ್ನೆಲೆಯಲ್ಲಿ ತನ್ನ ಸ್ವಕ್ಷೇತ್ರವಾದ ಹುಬ್ಬಳ್ಳಿ ಧಾರವಾಢ ಸೆಂಟ್ರಲ್ ಟಿಕೆಟ್ ನಿರಾಕರಿಸಿದ ನಂತರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ  ಜಗದೀಶ್ ಶೆಟ್ಟರ್ ಅವರು ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ. ಆದರೆ ಇನ್ನೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರುಗಳ ಫೋಟೋಗಳು ಕಚೇರಿಯ ಗೋಡೆಯ ಮೇಲೆ ರಾರಾಜಿಸುತ್ತಿವೆ. ಈ ವಿಚಾರ ಈಗ ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸ್ವಾಭಾವಿಕವಾಗಿ, ಪಕ್ಷವು ಬದಲಾಗುತ್ತಿದ್ದಂತೆ, ಕಚೇರಿಯಲ್ಲಿ ಹೆಗ್ಗುರುತುಗಳಾಗಿ ರಾರಾಜಿಸುವ ಫೋಟೋಗಳನ್ನು ಕಿತ್ತೊಗೆದು, ತಮ್ಮ ರಾಜಕೀಯ ನಿಲುವಿಗೆ ಒಗ್ಗುವಂತಹ ಹಾಲಿ ಪಕ್ಷದ ಫೋಟೋಗಳನ್ನು ಹಾಕುವುದು ವಾಡಿಕೆಯಾಗಿದೆ. ಈಗಿಂದೀಗಲೇ ನಾನು ನನ್ನ ಹೊಸ ಪಕ್ಷದ ನಾಯಕರ ಭಾವಚಿತ್ರಗಳನ್ನು ನನ್ನ ಕಚೇರಿಯಲ್ಲಿ ನೇತು ಹಾಕಬಹುದು. ಆದರೆ ಅದು ನನಗೆ ಇಷ್ಟವಿಲ್ಲ. ಅದು ನನ್ನ ವ್ಯಕ್ತಿತ್ವವೂ ಅಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಅವರು 1994 ರಿಂದ ಬಿಜೆಪಿ ಸದಸ್ಯರಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿ ಜೊತೆಗಿನ ದೀರ್ಘಕಾಲದ ನಂಟು ಮುರಿದುಕೊಂಡಿರುವ ಶೆಟ್ಟರ್ ಈಗ ಕಾಂಗ್ರೆಸ್ ಧ್ವಜ ಹಿಡಿದು ಆ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ತಮ್ಮ ಹಿಂದಿನದನ್ನು ಬದಿಗಿಟ್ಟು, ಶೆಟ್ಟರ್ ತಮ್ಮ ಗೃಹ ಕಚೇರಿಯಲ್ಲಿ ಸೋಫಾದಲ್ಲಿ ಕುಳಿತು ತನ್ನ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಎರಡು ಫೋಟೋ ಫ್ರೇಮ್​​ಗಳು ಅವರು ಕುಳಿತುಕೊಳ್ಳುವ ಹಿಂದಿನ ಗೋಡೆಯ ಮೇಲೆ ಇನ್ನೂ ನೇತಾಡುತ್ತಿವೆ. ಅದೇ ಸೋಫಾದಲ್ಲಿ ಕುಳಿತು ಮಾಧ್ಯಮಗಳಿಗೂ ಸಂದರ್ಶನ ನೀಡುತ್ತಾರೆ. ಜನರನ್ನು ಭೇಟಿ ಮಾಡುತ್ತಿದ್ದಾರೆ.

ಇನ್ನು ಈ ಫೋಟೋಗಳ ಬಗ್ಗೆ ಪ್ರಶ್ನಿಸಿದಾಗ ತಮ್ಮದೇ ಆದ ರೀತಿಯಲ್ಲಿ ಉತ್ತರಿಸಿದ್ದಾರೆ ಜಗದೀಶ್ ಶೆಟ್ಟರ್. ಪ್ರಧಾನಿ ನರೇಂದ್ರ ಮೋದಿಯವರಿಗೆ ಗೌರವ ಸೂಚಿಸುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಚಿತ್ರಗಳನ್ನು ತೆಗೆಯುವುದು ಒಳ್ಳೆಯ ಸಂಪ್ರದಾಯವಲ್ಲ. ನಾನು ಅದನ್ನು ಮಾಡಲು ಸಾಧ್ಯವಿಲ್ಲ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇವೆ ಎಂದು ಈ ಹಿಂದೆಯೂ ಸಾಕಷ್ಟು ಬಾರಿ ಹೇಳಿದ್ದೇನೆ. ಈ ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವೇ ಹೊರತು ರಾಜಕೀಯ ಆಕಾಂಕ್ಷೆಗಾಗಿ ಅಲ್ಲ ಎಂದು ಸೂಕ್ಷ್ಮವಾಗಿ ಹೇಳಿದರು. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಯಿತು. ಹಾಗಾಗಿ ಬೇಷರತ್ತಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

4 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

11 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

19 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

21 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago