ಸುದ್ದಿಗಳು

ಏರುತ್ತಿದೆ ಬೇಸಿಗೆಯ ಬಿಸಿ ಗಾಳಿ : ಉನ್ನತ ಮಟ್ಟದ ಸಭೆ ಮಾಡಿದ ಪ್ರಧಾನಿ ಮೋದಿ : ಪ್ರತಿ ದಿನ ಹವಾಮಾನ ವರದಿ ನೀಡಲು ಸಲಹೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆಗೊಳ್ತಿದೆ. ಈ ಬಿಸಿ ಗಾಳಿಯನ್ನು ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ  ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಪ್ರಧಾನಿಯವರಿಗೆ ಮುಂದಿನ ಕೆಲವು ತಿಂಗಳುಗಳ ಹವಾಮಾನ ಮುನ್ಸೂಚನೆಯ ವಿವರ ನೀಡಿದರು.

Advertisement
Advertisement

ಮುಂದಿನ ಋತುವಿನಲ್ಲಿ ಸಹಜ ಮುಂಗಾರು ಇರುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಬೇಸಿಗೆಯ ಹಿನ್ನೆಲೆಯಲ್ಲಿ ನಾಗರಿಕರು, ವೈದ್ಯಕೀಯ ವೃತ್ತಿಪರರು, ಪುರಸಭೆ ಮತ್ತು ಪಂಚಾಯತ್ ಅಧಿಕಾರಿಗಳು, ಅಗ್ನಿಶಾಮಕ ದಳದಂತಹ ವಿಪತ್ತು ಸ್ಪಂದನಾ ತಂಡಗಳೂ ಸೇರಿದಂತೆ ಎಲ್ಲರಿಗೂ ಪ್ರತ್ಯೇಕ ಜಾಗೃತಿ ಸಂದೇಶವನ್ನು ಕಳುಹಿಸಬೇಕು ಎಂದು ಪ್ರಧಾನಮಂತ್ರಿ ಸಭೆಯಲ್ಲಿ ಸಲಹೆ ನೀಡಿದರು.

ವಿಪರೀತ ಬಿಸಿಗಾಳಿಯಂಥ ಸಂದರ್ಭಗಳನ್ನು ಎದುರಿಸುವು ನಿಟ್ಟಿನಲ್ಲಿ ಮಕ್ಕಳನ್ನು ಜಾಗೃತಗೊಳಿಸಲು ಶಾಲೆಗಳಲ್ಲಿ ಕೆಲವು ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲು ಸಲಹೆ ನೀಡಲಾಯಿತು.

ಬೇಸಿಗೆಯ ಧಗೆ ಎದುರಿಸಲು ಏನೆಲ್ಲ ಮಾಡಬಹುದು? ಏನೆಲ್ಲ ಮಾಡಬಾರದು ಎಂಬ ಮಾರ್ಗಸೂಚಿಯನ್ನು ಸರಳವಾಗಿ ಅರ್ಥವಾಗುವ ಮಾದರಿಗಳಲ್ಲಿ ಸಿದ್ಧಪಡಿಸಬೇಕು. ಪ್ಯಾಂಪ್ಲೆಟ್​ಗಳು, ಚಿತ್ರಗಳು, ಸಿನಿಮಾಗಳು ಇತ್ಯಾದಿಗಳ ಮೂಲಕ ಜಾಗೃತಿ ಮೂಡಿಸಬೇಕೆಂದು ಪ್ರಧಾನಿ ಸಲಹೆ ನೀಡಿದರು.

ರಾಬಿ ಬೆಳೆಗಳ ಮೇಲೆ ಹವಾಮಾನದ ಪ್ರಭಾವ ಮತ್ತು ಪ್ರಮುಖ ಬೆಳೆಗಳ ನಿರೀಕ್ಷಿತ ಇಳುವರಿ ಬಗ್ಗೆಯೂ ಪ್ರಧಾನಿಗೆ ಮಾಹಿತಿ ನೀಡಲಾಯಿತು. ನೀರಾವರಿ, ನೀರು ಪೂರೈಕೆ, ಮೇವು ಮತ್ತು ಕುಡಿಯುವ ನೀರಿನ ಮೇಲ್ವಿಚಾರಣೆಗಾಗಿ ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಚರ್ಚಿಸಲಾಯಿತು. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯಗಳು ಮಾಡಿಕೊಂಡಿರುವ ಸನ್ನದ್ಧತೆ, ಆಸ್ಪತ್ರೆ ಮೂಲಸೌಕರ್ಯಗಳ ಬಗ್ಗೆಯೂ ಪ್ರಧಾನಿಯವರಿಗೆ ವಿವರಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

Advertisement

ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡಲು ಪ್ರಧಾನಿ ಸಲಹೆ

ಸುಲಭವಾಗಿ ಅರ್ಥವಾಗುವಂತೆ ಮತ್ತು ಸರಳವಾಗಿ ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡುವಂತೆ ಭಾರತೀಯ ಹವಾಮಾನ ಇಲಾಖೆಗೆ ಮೋದಿ ಸೂಚನೆ ನೀಡಿದರು. ಟಿವಿಗಳಲ್ಲಿ, ಎಫ್​ಎಂ ರೇಡಕಿಯೋಗಳಲ್ಲಿಯೂ ಹವಾಮಾನ ಮುನ್ಸೂಚನೆ ವಿವರ ಪ್ರಸಾರ ಮಾಡುವಂತೆ ಸಲಹೆ ನೀಡಿದರು. ಅಗ್ನಿಶಾಮಕ ಸಿಬ್ಬಂದಿಯಿಂದ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸುವಂತೆ ಮತ್ತು ಆಸ್ಪತ್ರೆಗಳಲ್ಲಿ ಅಗ್ನಿಶಾಮಕಕ್ಕೆ ಸಂಬಂಧಿಸಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಪ್ರಧಾನಿ ಸೂಚಿಸದರು ಎಂದು ಪ್ರಕಟಣೆ ತಿಳಿಸಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

28 minutes ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

6 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

7 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

7 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

8 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

9 hours ago