Advertisement
ಸುದ್ದಿಗಳು

ಏರುತ್ತಿದೆ ಬೇಸಿಗೆಯ ಬಿಸಿ ಗಾಳಿ : ಉನ್ನತ ಮಟ್ಟದ ಸಭೆ ಮಾಡಿದ ಪ್ರಧಾನಿ ಮೋದಿ : ಪ್ರತಿ ದಿನ ಹವಾಮಾನ ವರದಿ ನೀಡಲು ಸಲಹೆ

Share

ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆಗೊಳ್ತಿದೆ. ಈ ಬಿಸಿ ಗಾಳಿಯನ್ನು ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ  ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಪ್ರಧಾನಿಯವರಿಗೆ ಮುಂದಿನ ಕೆಲವು ತಿಂಗಳುಗಳ ಹವಾಮಾನ ಮುನ್ಸೂಚನೆಯ ವಿವರ ನೀಡಿದರು.

ಮುಂದಿನ ಋತುವಿನಲ್ಲಿ ಸಹಜ ಮುಂಗಾರು ಇರುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಬೇಸಿಗೆಯ ಹಿನ್ನೆಲೆಯಲ್ಲಿ ನಾಗರಿಕರು, ವೈದ್ಯಕೀಯ ವೃತ್ತಿಪರರು, ಪುರಸಭೆ ಮತ್ತು ಪಂಚಾಯತ್ ಅಧಿಕಾರಿಗಳು, ಅಗ್ನಿಶಾಮಕ ದಳದಂತಹ ವಿಪತ್ತು ಸ್ಪಂದನಾ ತಂಡಗಳೂ ಸೇರಿದಂತೆ ಎಲ್ಲರಿಗೂ ಪ್ರತ್ಯೇಕ ಜಾಗೃತಿ ಸಂದೇಶವನ್ನು ಕಳುಹಿಸಬೇಕು ಎಂದು ಪ್ರಧಾನಮಂತ್ರಿ ಸಭೆಯಲ್ಲಿ ಸಲಹೆ ನೀಡಿದರು.

ವಿಪರೀತ ಬಿಸಿಗಾಳಿಯಂಥ ಸಂದರ್ಭಗಳನ್ನು ಎದುರಿಸುವು ನಿಟ್ಟಿನಲ್ಲಿ ಮಕ್ಕಳನ್ನು ಜಾಗೃತಗೊಳಿಸಲು ಶಾಲೆಗಳಲ್ಲಿ ಕೆಲವು ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲು ಸಲಹೆ ನೀಡಲಾಯಿತು.

ಬೇಸಿಗೆಯ ಧಗೆ ಎದುರಿಸಲು ಏನೆಲ್ಲ ಮಾಡಬಹುದು? ಏನೆಲ್ಲ ಮಾಡಬಾರದು ಎಂಬ ಮಾರ್ಗಸೂಚಿಯನ್ನು ಸರಳವಾಗಿ ಅರ್ಥವಾಗುವ ಮಾದರಿಗಳಲ್ಲಿ ಸಿದ್ಧಪಡಿಸಬೇಕು. ಪ್ಯಾಂಪ್ಲೆಟ್​ಗಳು, ಚಿತ್ರಗಳು, ಸಿನಿಮಾಗಳು ಇತ್ಯಾದಿಗಳ ಮೂಲಕ ಜಾಗೃತಿ ಮೂಡಿಸಬೇಕೆಂದು ಪ್ರಧಾನಿ ಸಲಹೆ ನೀಡಿದರು.

ರಾಬಿ ಬೆಳೆಗಳ ಮೇಲೆ ಹವಾಮಾನದ ಪ್ರಭಾವ ಮತ್ತು ಪ್ರಮುಖ ಬೆಳೆಗಳ ನಿರೀಕ್ಷಿತ ಇಳುವರಿ ಬಗ್ಗೆಯೂ ಪ್ರಧಾನಿಗೆ ಮಾಹಿತಿ ನೀಡಲಾಯಿತು. ನೀರಾವರಿ, ನೀರು ಪೂರೈಕೆ, ಮೇವು ಮತ್ತು ಕುಡಿಯುವ ನೀರಿನ ಮೇಲ್ವಿಚಾರಣೆಗಾಗಿ ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಚರ್ಚಿಸಲಾಯಿತು. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯಗಳು ಮಾಡಿಕೊಂಡಿರುವ ಸನ್ನದ್ಧತೆ, ಆಸ್ಪತ್ರೆ ಮೂಲಸೌಕರ್ಯಗಳ ಬಗ್ಗೆಯೂ ಪ್ರಧಾನಿಯವರಿಗೆ ವಿವರಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡಲು ಪ್ರಧಾನಿ ಸಲಹೆ

ಸುಲಭವಾಗಿ ಅರ್ಥವಾಗುವಂತೆ ಮತ್ತು ಸರಳವಾಗಿ ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡುವಂತೆ ಭಾರತೀಯ ಹವಾಮಾನ ಇಲಾಖೆಗೆ ಮೋದಿ ಸೂಚನೆ ನೀಡಿದರು. ಟಿವಿಗಳಲ್ಲಿ, ಎಫ್​ಎಂ ರೇಡಕಿಯೋಗಳಲ್ಲಿಯೂ ಹವಾಮಾನ ಮುನ್ಸೂಚನೆ ವಿವರ ಪ್ರಸಾರ ಮಾಡುವಂತೆ ಸಲಹೆ ನೀಡಿದರು. ಅಗ್ನಿಶಾಮಕ ಸಿಬ್ಬಂದಿಯಿಂದ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸುವಂತೆ ಮತ್ತು ಆಸ್ಪತ್ರೆಗಳಲ್ಲಿ ಅಗ್ನಿಶಾಮಕಕ್ಕೆ ಸಂಬಂಧಿಸಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಪ್ರಧಾನಿ ಸೂಚಿಸದರು ಎಂದು ಪ್ರಕಟಣೆ ತಿಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

4 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago