Advertisement
ಸುದ್ದಿಗಳು

ಏರುತ್ತಿದೆ ಬೇಸಿಗೆಯ ಬಿಸಿ ಗಾಳಿ : ಉನ್ನತ ಮಟ್ಟದ ಸಭೆ ಮಾಡಿದ ಪ್ರಧಾನಿ ಮೋದಿ : ಪ್ರತಿ ದಿನ ಹವಾಮಾನ ವರದಿ ನೀಡಲು ಸಲಹೆ

Share

ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆಗೊಳ್ತಿದೆ. ಈ ಬಿಸಿ ಗಾಳಿಯನ್ನು ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ  ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಪ್ರಧಾನಿಯವರಿಗೆ ಮುಂದಿನ ಕೆಲವು ತಿಂಗಳುಗಳ ಹವಾಮಾನ ಮುನ್ಸೂಚನೆಯ ವಿವರ ನೀಡಿದರು.

ಮುಂದಿನ ಋತುವಿನಲ್ಲಿ ಸಹಜ ಮುಂಗಾರು ಇರುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಬೇಸಿಗೆಯ ಹಿನ್ನೆಲೆಯಲ್ಲಿ ನಾಗರಿಕರು, ವೈದ್ಯಕೀಯ ವೃತ್ತಿಪರರು, ಪುರಸಭೆ ಮತ್ತು ಪಂಚಾಯತ್ ಅಧಿಕಾರಿಗಳು, ಅಗ್ನಿಶಾಮಕ ದಳದಂತಹ ವಿಪತ್ತು ಸ್ಪಂದನಾ ತಂಡಗಳೂ ಸೇರಿದಂತೆ ಎಲ್ಲರಿಗೂ ಪ್ರತ್ಯೇಕ ಜಾಗೃತಿ ಸಂದೇಶವನ್ನು ಕಳುಹಿಸಬೇಕು ಎಂದು ಪ್ರಧಾನಮಂತ್ರಿ ಸಭೆಯಲ್ಲಿ ಸಲಹೆ ನೀಡಿದರು.

ವಿಪರೀತ ಬಿಸಿಗಾಳಿಯಂಥ ಸಂದರ್ಭಗಳನ್ನು ಎದುರಿಸುವು ನಿಟ್ಟಿನಲ್ಲಿ ಮಕ್ಕಳನ್ನು ಜಾಗೃತಗೊಳಿಸಲು ಶಾಲೆಗಳಲ್ಲಿ ಕೆಲವು ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲು ಸಲಹೆ ನೀಡಲಾಯಿತು.

ಬೇಸಿಗೆಯ ಧಗೆ ಎದುರಿಸಲು ಏನೆಲ್ಲ ಮಾಡಬಹುದು? ಏನೆಲ್ಲ ಮಾಡಬಾರದು ಎಂಬ ಮಾರ್ಗಸೂಚಿಯನ್ನು ಸರಳವಾಗಿ ಅರ್ಥವಾಗುವ ಮಾದರಿಗಳಲ್ಲಿ ಸಿದ್ಧಪಡಿಸಬೇಕು. ಪ್ಯಾಂಪ್ಲೆಟ್​ಗಳು, ಚಿತ್ರಗಳು, ಸಿನಿಮಾಗಳು ಇತ್ಯಾದಿಗಳ ಮೂಲಕ ಜಾಗೃತಿ ಮೂಡಿಸಬೇಕೆಂದು ಪ್ರಧಾನಿ ಸಲಹೆ ನೀಡಿದರು.

ರಾಬಿ ಬೆಳೆಗಳ ಮೇಲೆ ಹವಾಮಾನದ ಪ್ರಭಾವ ಮತ್ತು ಪ್ರಮುಖ ಬೆಳೆಗಳ ನಿರೀಕ್ಷಿತ ಇಳುವರಿ ಬಗ್ಗೆಯೂ ಪ್ರಧಾನಿಗೆ ಮಾಹಿತಿ ನೀಡಲಾಯಿತು. ನೀರಾವರಿ, ನೀರು ಪೂರೈಕೆ, ಮೇವು ಮತ್ತು ಕುಡಿಯುವ ನೀರಿನ ಮೇಲ್ವಿಚಾರಣೆಗಾಗಿ ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಚರ್ಚಿಸಲಾಯಿತು. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯಗಳು ಮಾಡಿಕೊಂಡಿರುವ ಸನ್ನದ್ಧತೆ, ಆಸ್ಪತ್ರೆ ಮೂಲಸೌಕರ್ಯಗಳ ಬಗ್ಗೆಯೂ ಪ್ರಧಾನಿಯವರಿಗೆ ವಿವರಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡಲು ಪ್ರಧಾನಿ ಸಲಹೆ

ಸುಲಭವಾಗಿ ಅರ್ಥವಾಗುವಂತೆ ಮತ್ತು ಸರಳವಾಗಿ ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡುವಂತೆ ಭಾರತೀಯ ಹವಾಮಾನ ಇಲಾಖೆಗೆ ಮೋದಿ ಸೂಚನೆ ನೀಡಿದರು. ಟಿವಿಗಳಲ್ಲಿ, ಎಫ್​ಎಂ ರೇಡಕಿಯೋಗಳಲ್ಲಿಯೂ ಹವಾಮಾನ ಮುನ್ಸೂಚನೆ ವಿವರ ಪ್ರಸಾರ ಮಾಡುವಂತೆ ಸಲಹೆ ನೀಡಿದರು. ಅಗ್ನಿಶಾಮಕ ಸಿಬ್ಬಂದಿಯಿಂದ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸುವಂತೆ ಮತ್ತು ಆಸ್ಪತ್ರೆಗಳಲ್ಲಿ ಅಗ್ನಿಶಾಮಕಕ್ಕೆ ಸಂಬಂಧಿಸಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಪ್ರಧಾನಿ ಸೂಚಿಸದರು ಎಂದು ಪ್ರಕಟಣೆ ತಿಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

8 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

8 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

17 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

22 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago