Advertisement
ಸುದ್ದಿಗಳು

ಏರುತ್ತಿದೆ ಬೇಸಿಗೆಯ ಬಿಸಿ ಗಾಳಿ : ಉನ್ನತ ಮಟ್ಟದ ಸಭೆ ಮಾಡಿದ ಪ್ರಧಾನಿ ಮೋದಿ : ಪ್ರತಿ ದಿನ ಹವಾಮಾನ ವರದಿ ನೀಡಲು ಸಲಹೆ

Share

ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆಗೊಳ್ತಿದೆ. ಈ ಬಿಸಿ ಗಾಳಿಯನ್ನು ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ  ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಪ್ರಧಾನಿಯವರಿಗೆ ಮುಂದಿನ ಕೆಲವು ತಿಂಗಳುಗಳ ಹವಾಮಾನ ಮುನ್ಸೂಚನೆಯ ವಿವರ ನೀಡಿದರು.

ಮುಂದಿನ ಋತುವಿನಲ್ಲಿ ಸಹಜ ಮುಂಗಾರು ಇರುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಬೇಸಿಗೆಯ ಹಿನ್ನೆಲೆಯಲ್ಲಿ ನಾಗರಿಕರು, ವೈದ್ಯಕೀಯ ವೃತ್ತಿಪರರು, ಪುರಸಭೆ ಮತ್ತು ಪಂಚಾಯತ್ ಅಧಿಕಾರಿಗಳು, ಅಗ್ನಿಶಾಮಕ ದಳದಂತಹ ವಿಪತ್ತು ಸ್ಪಂದನಾ ತಂಡಗಳೂ ಸೇರಿದಂತೆ ಎಲ್ಲರಿಗೂ ಪ್ರತ್ಯೇಕ ಜಾಗೃತಿ ಸಂದೇಶವನ್ನು ಕಳುಹಿಸಬೇಕು ಎಂದು ಪ್ರಧಾನಮಂತ್ರಿ ಸಭೆಯಲ್ಲಿ ಸಲಹೆ ನೀಡಿದರು.

ವಿಪರೀತ ಬಿಸಿಗಾಳಿಯಂಥ ಸಂದರ್ಭಗಳನ್ನು ಎದುರಿಸುವು ನಿಟ್ಟಿನಲ್ಲಿ ಮಕ್ಕಳನ್ನು ಜಾಗೃತಗೊಳಿಸಲು ಶಾಲೆಗಳಲ್ಲಿ ಕೆಲವು ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲು ಸಲಹೆ ನೀಡಲಾಯಿತು.

ಬೇಸಿಗೆಯ ಧಗೆ ಎದುರಿಸಲು ಏನೆಲ್ಲ ಮಾಡಬಹುದು? ಏನೆಲ್ಲ ಮಾಡಬಾರದು ಎಂಬ ಮಾರ್ಗಸೂಚಿಯನ್ನು ಸರಳವಾಗಿ ಅರ್ಥವಾಗುವ ಮಾದರಿಗಳಲ್ಲಿ ಸಿದ್ಧಪಡಿಸಬೇಕು. ಪ್ಯಾಂಪ್ಲೆಟ್​ಗಳು, ಚಿತ್ರಗಳು, ಸಿನಿಮಾಗಳು ಇತ್ಯಾದಿಗಳ ಮೂಲಕ ಜಾಗೃತಿ ಮೂಡಿಸಬೇಕೆಂದು ಪ್ರಧಾನಿ ಸಲಹೆ ನೀಡಿದರು.

ರಾಬಿ ಬೆಳೆಗಳ ಮೇಲೆ ಹವಾಮಾನದ ಪ್ರಭಾವ ಮತ್ತು ಪ್ರಮುಖ ಬೆಳೆಗಳ ನಿರೀಕ್ಷಿತ ಇಳುವರಿ ಬಗ್ಗೆಯೂ ಪ್ರಧಾನಿಗೆ ಮಾಹಿತಿ ನೀಡಲಾಯಿತು. ನೀರಾವರಿ, ನೀರು ಪೂರೈಕೆ, ಮೇವು ಮತ್ತು ಕುಡಿಯುವ ನೀರಿನ ಮೇಲ್ವಿಚಾರಣೆಗಾಗಿ ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಚರ್ಚಿಸಲಾಯಿತು. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯಗಳು ಮಾಡಿಕೊಂಡಿರುವ ಸನ್ನದ್ಧತೆ, ಆಸ್ಪತ್ರೆ ಮೂಲಸೌಕರ್ಯಗಳ ಬಗ್ಗೆಯೂ ಪ್ರಧಾನಿಯವರಿಗೆ ವಿವರಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡಲು ಪ್ರಧಾನಿ ಸಲಹೆ

ಸುಲಭವಾಗಿ ಅರ್ಥವಾಗುವಂತೆ ಮತ್ತು ಸರಳವಾಗಿ ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡುವಂತೆ ಭಾರತೀಯ ಹವಾಮಾನ ಇಲಾಖೆಗೆ ಮೋದಿ ಸೂಚನೆ ನೀಡಿದರು. ಟಿವಿಗಳಲ್ಲಿ, ಎಫ್​ಎಂ ರೇಡಕಿಯೋಗಳಲ್ಲಿಯೂ ಹವಾಮಾನ ಮುನ್ಸೂಚನೆ ವಿವರ ಪ್ರಸಾರ ಮಾಡುವಂತೆ ಸಲಹೆ ನೀಡಿದರು. ಅಗ್ನಿಶಾಮಕ ಸಿಬ್ಬಂದಿಯಿಂದ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸುವಂತೆ ಮತ್ತು ಆಸ್ಪತ್ರೆಗಳಲ್ಲಿ ಅಗ್ನಿಶಾಮಕಕ್ಕೆ ಸಂಬಂಧಿಸಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಪ್ರಧಾನಿ ಸೂಚಿಸದರು ಎಂದು ಪ್ರಕಟಣೆ ತಿಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

32 minutes ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

41 minutes ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

2 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

15 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

15 hours ago