Advertisement
ಸುದ್ದಿಗಳು

ಏರುತ್ತಿದೆ ಬೇಸಿಗೆಯ ಬಿಸಿ ಗಾಳಿ : ಉನ್ನತ ಮಟ್ಟದ ಸಭೆ ಮಾಡಿದ ಪ್ರಧಾನಿ ಮೋದಿ : ಪ್ರತಿ ದಿನ ಹವಾಮಾನ ವರದಿ ನೀಡಲು ಸಲಹೆ

Share

ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆಗೊಳ್ತಿದೆ. ಈ ಬಿಸಿ ಗಾಳಿಯನ್ನು ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ  ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಪ್ರಧಾನಿಯವರಿಗೆ ಮುಂದಿನ ಕೆಲವು ತಿಂಗಳುಗಳ ಹವಾಮಾನ ಮುನ್ಸೂಚನೆಯ ವಿವರ ನೀಡಿದರು.

ಮುಂದಿನ ಋತುವಿನಲ್ಲಿ ಸಹಜ ಮುಂಗಾರು ಇರುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಬೇಸಿಗೆಯ ಹಿನ್ನೆಲೆಯಲ್ಲಿ ನಾಗರಿಕರು, ವೈದ್ಯಕೀಯ ವೃತ್ತಿಪರರು, ಪುರಸಭೆ ಮತ್ತು ಪಂಚಾಯತ್ ಅಧಿಕಾರಿಗಳು, ಅಗ್ನಿಶಾಮಕ ದಳದಂತಹ ವಿಪತ್ತು ಸ್ಪಂದನಾ ತಂಡಗಳೂ ಸೇರಿದಂತೆ ಎಲ್ಲರಿಗೂ ಪ್ರತ್ಯೇಕ ಜಾಗೃತಿ ಸಂದೇಶವನ್ನು ಕಳುಹಿಸಬೇಕು ಎಂದು ಪ್ರಧಾನಮಂತ್ರಿ ಸಭೆಯಲ್ಲಿ ಸಲಹೆ ನೀಡಿದರು.

ವಿಪರೀತ ಬಿಸಿಗಾಳಿಯಂಥ ಸಂದರ್ಭಗಳನ್ನು ಎದುರಿಸುವು ನಿಟ್ಟಿನಲ್ಲಿ ಮಕ್ಕಳನ್ನು ಜಾಗೃತಗೊಳಿಸಲು ಶಾಲೆಗಳಲ್ಲಿ ಕೆಲವು ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲು ಸಲಹೆ ನೀಡಲಾಯಿತು.

ಬೇಸಿಗೆಯ ಧಗೆ ಎದುರಿಸಲು ಏನೆಲ್ಲ ಮಾಡಬಹುದು? ಏನೆಲ್ಲ ಮಾಡಬಾರದು ಎಂಬ ಮಾರ್ಗಸೂಚಿಯನ್ನು ಸರಳವಾಗಿ ಅರ್ಥವಾಗುವ ಮಾದರಿಗಳಲ್ಲಿ ಸಿದ್ಧಪಡಿಸಬೇಕು. ಪ್ಯಾಂಪ್ಲೆಟ್​ಗಳು, ಚಿತ್ರಗಳು, ಸಿನಿಮಾಗಳು ಇತ್ಯಾದಿಗಳ ಮೂಲಕ ಜಾಗೃತಿ ಮೂಡಿಸಬೇಕೆಂದು ಪ್ರಧಾನಿ ಸಲಹೆ ನೀಡಿದರು.

ರಾಬಿ ಬೆಳೆಗಳ ಮೇಲೆ ಹವಾಮಾನದ ಪ್ರಭಾವ ಮತ್ತು ಪ್ರಮುಖ ಬೆಳೆಗಳ ನಿರೀಕ್ಷಿತ ಇಳುವರಿ ಬಗ್ಗೆಯೂ ಪ್ರಧಾನಿಗೆ ಮಾಹಿತಿ ನೀಡಲಾಯಿತು. ನೀರಾವರಿ, ನೀರು ಪೂರೈಕೆ, ಮೇವು ಮತ್ತು ಕುಡಿಯುವ ನೀರಿನ ಮೇಲ್ವಿಚಾರಣೆಗಾಗಿ ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಚರ್ಚಿಸಲಾಯಿತು. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯಗಳು ಮಾಡಿಕೊಂಡಿರುವ ಸನ್ನದ್ಧತೆ, ಆಸ್ಪತ್ರೆ ಮೂಲಸೌಕರ್ಯಗಳ ಬಗ್ಗೆಯೂ ಪ್ರಧಾನಿಯವರಿಗೆ ವಿವರಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡಲು ಪ್ರಧಾನಿ ಸಲಹೆ

ಸುಲಭವಾಗಿ ಅರ್ಥವಾಗುವಂತೆ ಮತ್ತು ಸರಳವಾಗಿ ಪ್ರತಿ ದಿನ ಹವಾಮಾನ ಮುನ್ಸೂಚನೆ ನೀಡುವಂತೆ ಭಾರತೀಯ ಹವಾಮಾನ ಇಲಾಖೆಗೆ ಮೋದಿ ಸೂಚನೆ ನೀಡಿದರು. ಟಿವಿಗಳಲ್ಲಿ, ಎಫ್​ಎಂ ರೇಡಕಿಯೋಗಳಲ್ಲಿಯೂ ಹವಾಮಾನ ಮುನ್ಸೂಚನೆ ವಿವರ ಪ್ರಸಾರ ಮಾಡುವಂತೆ ಸಲಹೆ ನೀಡಿದರು. ಅಗ್ನಿಶಾಮಕ ಸಿಬ್ಬಂದಿಯಿಂದ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸುವಂತೆ ಮತ್ತು ಆಸ್ಪತ್ರೆಗಳಲ್ಲಿ ಅಗ್ನಿಶಾಮಕಕ್ಕೆ ಸಂಬಂಧಿಸಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಪ್ರಧಾನಿ ಸೂಚಿಸದರು ಎಂದು ಪ್ರಕಟಣೆ ತಿಳಿಸಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

4 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

12 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

20 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago