MIRROR FOCUS

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಇಂದು ಉಭಯ ದೇಶಗಳ  ನಡುವೆ ದೆಹಲಿಯಲ್ಲಿ ಕೃಷಿ, ಸಾಂಪ್ರದಾಯಿಕ ಔಷಧ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಒಪ್ಪಂದಗಳ ವಿನಿಮಯ ನಡೆಯಿತು.ಉಭಯ ದೇಶಗಳ ನಾಯಕರ  ನಡುವೆ ನಡೆದ ನಿಯೋಗ ಮಟ್ಟದ ಮಾತುಕತೆಯ ನಂತರ ಈ ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

Advertisement
Advertisement

ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪೆಹಲ್ಗಾಮ್‌ ಉಗ್ರರ ದಾಳಿಯನ್ನು ಉಲ್ಲೇಖಿಸಿ, ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ ಭಾರತ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದರು. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದಲ್ಲಿ ಅಂಗೋಲಾ ನೀಡಿದ ಬೆಂಬಲಕ್ಕಾಗಿ  ಧನ್ಯವಾದ ಅರ್ಪಿಸಿದ ಪ್ರಧಾನಿ,  ಭಯೋತ್ಪಾದನೆ ಮಾನವೀಯತೆಗೆ ದೊಡ್ಡ ಬೆದರಿಕೆ ಎಂದು ಭಾರತ ಮತ್ತು ಅಂಗೋಲಾ ಒಪ್ಪಿಕೊಂಡಿವೆ ಎಂದು ಹೇಳಿದರು.

ಉಭಯ ದೇಶಗಳು  ಈ ವರ್ಷ ತಮ್ಮ ರಾಜತಾಂತ್ರಿಕ ಸಂಬಂಧಗಳ 40 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ. ಅಂಗೋಲಾದ ಸೇನಾ ಪಡೆಗಳ ಆಧುನೀಕರಣಕ್ಕಾಗಿ 200 ಮಿಲಿಯನ್ ಡಾಲರ್‌ಗಳ ರಕ್ಷಣಾ ಕ್ರೆಡಿಟ್ ಲೈನ್ ಅನ್ನು ಅನುಮೋದಿಸಲಾಗಿದೆ ಎಂದ ಪ್ರಧಾನಿ,  ಅಂಗೋಲಾದ ಸಶಸ್ತ್ರ ಪಡೆಗಳ ತರಬೇತಿಯಲ್ಲಿ ಭಾರತ ಸಹಕರಿಸಲು ಸಂತೋಷವಾಗುತ್ತದೆ ಎಂದರು. ಆಫ್ರಿಕನ್ ಒಕ್ಕೂಟದ ಅಧ್ಯಕ್ಷತೆಗಾಗಿ ಅಂಗೋಲಾಗೆ  ಶುಭಾಶಯ ಸಲ್ಲಿಸಿದ ಪ್ರಧಾನಿ, ಭಾರತದ ಜಿ 20 ಅಧ್ಯಕ್ಷತೆಯ ಅವಧಿಯಲ್ಲಿ, ಆಫ್ರಿಕನ್ ಒಕ್ಕೂಟಕ್ಕೆ  ಶಾಶ್ವತ ಸದಸ್ಯತ್ವ ದೊರೆತಿರುವುದು ಭಾರತಕ್ಕೆ ಹೆಮ್ಮೆಯ ವಿಷಯ ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

7 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

8 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

8 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

14 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

15 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

22 hours ago