Advertisement
MIRROR FOCUS

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

Share

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಇಂದು ಉಭಯ ದೇಶಗಳ  ನಡುವೆ ದೆಹಲಿಯಲ್ಲಿ ಕೃಷಿ, ಸಾಂಪ್ರದಾಯಿಕ ಔಷಧ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಒಪ್ಪಂದಗಳ ವಿನಿಮಯ ನಡೆಯಿತು.ಉಭಯ ದೇಶಗಳ ನಾಯಕರ  ನಡುವೆ ನಡೆದ ನಿಯೋಗ ಮಟ್ಟದ ಮಾತುಕತೆಯ ನಂತರ ಈ ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪೆಹಲ್ಗಾಮ್‌ ಉಗ್ರರ ದಾಳಿಯನ್ನು ಉಲ್ಲೇಖಿಸಿ, ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ ಭಾರತ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದರು. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದಲ್ಲಿ ಅಂಗೋಲಾ ನೀಡಿದ ಬೆಂಬಲಕ್ಕಾಗಿ  ಧನ್ಯವಾದ ಅರ್ಪಿಸಿದ ಪ್ರಧಾನಿ,  ಭಯೋತ್ಪಾದನೆ ಮಾನವೀಯತೆಗೆ ದೊಡ್ಡ ಬೆದರಿಕೆ ಎಂದು ಭಾರತ ಮತ್ತು ಅಂಗೋಲಾ ಒಪ್ಪಿಕೊಂಡಿವೆ ಎಂದು ಹೇಳಿದರು.

ಉಭಯ ದೇಶಗಳು  ಈ ವರ್ಷ ತಮ್ಮ ರಾಜತಾಂತ್ರಿಕ ಸಂಬಂಧಗಳ 40 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ. ಅಂಗೋಲಾದ ಸೇನಾ ಪಡೆಗಳ ಆಧುನೀಕರಣಕ್ಕಾಗಿ 200 ಮಿಲಿಯನ್ ಡಾಲರ್‌ಗಳ ರಕ್ಷಣಾ ಕ್ರೆಡಿಟ್ ಲೈನ್ ಅನ್ನು ಅನುಮೋದಿಸಲಾಗಿದೆ ಎಂದ ಪ್ರಧಾನಿ,  ಅಂಗೋಲಾದ ಸಶಸ್ತ್ರ ಪಡೆಗಳ ತರಬೇತಿಯಲ್ಲಿ ಭಾರತ ಸಹಕರಿಸಲು ಸಂತೋಷವಾಗುತ್ತದೆ ಎಂದರು. ಆಫ್ರಿಕನ್ ಒಕ್ಕೂಟದ ಅಧ್ಯಕ್ಷತೆಗಾಗಿ ಅಂಗೋಲಾಗೆ  ಶುಭಾಶಯ ಸಲ್ಲಿಸಿದ ಪ್ರಧಾನಿ, ಭಾರತದ ಜಿ 20 ಅಧ್ಯಕ್ಷತೆಯ ಅವಧಿಯಲ್ಲಿ, ಆಫ್ರಿಕನ್ ಒಕ್ಕೂಟಕ್ಕೆ  ಶಾಶ್ವತ ಸದಸ್ಯತ್ವ ದೊರೆತಿರುವುದು ಭಾರತಕ್ಕೆ ಹೆಮ್ಮೆಯ ವಿಷಯ ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago