Advertisement
MIRROR FOCUS

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

Share

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಇಂದು ಉಭಯ ದೇಶಗಳ  ನಡುವೆ ದೆಹಲಿಯಲ್ಲಿ ಕೃಷಿ, ಸಾಂಪ್ರದಾಯಿಕ ಔಷಧ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಒಪ್ಪಂದಗಳ ವಿನಿಮಯ ನಡೆಯಿತು.ಉಭಯ ದೇಶಗಳ ನಾಯಕರ  ನಡುವೆ ನಡೆದ ನಿಯೋಗ ಮಟ್ಟದ ಮಾತುಕತೆಯ ನಂತರ ಈ ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪೆಹಲ್ಗಾಮ್‌ ಉಗ್ರರ ದಾಳಿಯನ್ನು ಉಲ್ಲೇಖಿಸಿ, ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ ಭಾರತ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದರು. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದಲ್ಲಿ ಅಂಗೋಲಾ ನೀಡಿದ ಬೆಂಬಲಕ್ಕಾಗಿ  ಧನ್ಯವಾದ ಅರ್ಪಿಸಿದ ಪ್ರಧಾನಿ,  ಭಯೋತ್ಪಾದನೆ ಮಾನವೀಯತೆಗೆ ದೊಡ್ಡ ಬೆದರಿಕೆ ಎಂದು ಭಾರತ ಮತ್ತು ಅಂಗೋಲಾ ಒಪ್ಪಿಕೊಂಡಿವೆ ಎಂದು ಹೇಳಿದರು.

ಉಭಯ ದೇಶಗಳು  ಈ ವರ್ಷ ತಮ್ಮ ರಾಜತಾಂತ್ರಿಕ ಸಂಬಂಧಗಳ 40 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ. ಅಂಗೋಲಾದ ಸೇನಾ ಪಡೆಗಳ ಆಧುನೀಕರಣಕ್ಕಾಗಿ 200 ಮಿಲಿಯನ್ ಡಾಲರ್‌ಗಳ ರಕ್ಷಣಾ ಕ್ರೆಡಿಟ್ ಲೈನ್ ಅನ್ನು ಅನುಮೋದಿಸಲಾಗಿದೆ ಎಂದ ಪ್ರಧಾನಿ,  ಅಂಗೋಲಾದ ಸಶಸ್ತ್ರ ಪಡೆಗಳ ತರಬೇತಿಯಲ್ಲಿ ಭಾರತ ಸಹಕರಿಸಲು ಸಂತೋಷವಾಗುತ್ತದೆ ಎಂದರು. ಆಫ್ರಿಕನ್ ಒಕ್ಕೂಟದ ಅಧ್ಯಕ್ಷತೆಗಾಗಿ ಅಂಗೋಲಾಗೆ  ಶುಭಾಶಯ ಸಲ್ಲಿಸಿದ ಪ್ರಧಾನಿ, ಭಾರತದ ಜಿ 20 ಅಧ್ಯಕ್ಷತೆಯ ಅವಧಿಯಲ್ಲಿ, ಆಫ್ರಿಕನ್ ಒಕ್ಕೂಟಕ್ಕೆ  ಶಾಶ್ವತ ಸದಸ್ಯತ್ವ ದೊರೆತಿರುವುದು ಭಾರತಕ್ಕೆ ಹೆಮ್ಮೆಯ ವಿಷಯ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago