ಒಮಿಕ್ರಾನ್ ವಿರುದ್ಧ ಹೋರಾಡಲು “ಸ್ವಯಂಅರಿವು – ಸ್ವಯಂಶಿಸ್ತು” ಅವಶ್ಯಕತೆಯಿದೆ ಎಂದ ಪ್ರಧಾನಿ ನರೇಂದ್ರ ಮೋದಿ |

December 27, 2021
10:42 AM

ಒಮಿಕ್ರಾನ್‌ ಹೊಸ ರೂಪಾಂತರವನ್ನು  ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement
Advertisement
Advertisement

ಅವರು  ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು  ಹಂಚಿಕೊಂಡರು.  ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್‌ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.

Advertisement

ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್‌ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror