ಒಮಿಕ್ರಾನ್ ವಿರುದ್ಧ ಹೋರಾಡಲು “ಸ್ವಯಂಅರಿವು – ಸ್ವಯಂಶಿಸ್ತು” ಅವಶ್ಯಕತೆಯಿದೆ ಎಂದ ಪ್ರಧಾನಿ ನರೇಂದ್ರ ಮೋದಿ |

December 27, 2021
10:42 AM

ಒಮಿಕ್ರಾನ್‌ ಹೊಸ ರೂಪಾಂತರವನ್ನು  ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ಅವರು  ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು  ಹಂಚಿಕೊಂಡರು.  ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್‌ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.

ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್‌ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್
ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ
April 21, 2026
7:21 AM
by: ಮಿರರ್‌ ಡೆಸ್ಕ್
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror