ಒಮಿಕ್ರಾನ್ ವಿರುದ್ಧ ಹೋರಾಡಲು “ಸ್ವಯಂಅರಿವು – ಸ್ವಯಂಶಿಸ್ತು” ಅವಶ್ಯಕತೆಯಿದೆ ಎಂದ ಪ್ರಧಾನಿ ನರೇಂದ್ರ ಮೋದಿ |

December 27, 2021
10:42 AM

ಒಮಿಕ್ರಾನ್‌ ಹೊಸ ರೂಪಾಂತರವನ್ನು  ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು  ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು  ಹಂಚಿಕೊಂಡರು.  ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್‌ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.

ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್‌ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror